Saturday, April 6, 2024

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಾಸ್ಥನಕ್ಕೆ ಶೋಭಾಯಾತ್ರೆಯೊಂದಿಗೆ ಹೊರೆಕಾಣಿಕೆ ಸಮರ್ಪಣೆ

ಕೈಕಂಬ: ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಸಮಸ್ತ ದೇವಾಡಿಗ ಸಮಾಜದಿಂದ ಷಷ್ಠಿ ರಥ ಸಮರ್ಪಣೆಯ ಪೂರ್ವಭಾವಿಯಾಗಿ ಮಾ.8 ರಂದು ಭಾನುವಾರ ಹೊರೆಕಾಣಿಕೆ ಮೆರವಣಿಗೆಯು ಬಹಳ ವಿಜೃಂಭಣೆಯಿಂದ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ದೇವಳದ ಪವಿತ್ರಪಾಣಿ ಮಾಧವ ಭಟ್ ತೆಂಗಿನಕಾಯಿ ಹೊಡೆಯುವ ಮೂಲಕ ಚಾಲನೆ ನೀಡಿದರು.

ಪೊಳಲಿ ವಿವೇಕಾನಂದ ರಸ್ತೆಯ ಪೊಳಲಿ ಮುಖದ್ವಾರದಿಂದ ಹತ್ತಾರು ವಾಹನಗಳೊಂದಿಗೆ ಚೆಂಡೆ, ಕೊಂಬು, ವಾಲಗ ಗೊಂಬೆಕುಣಿತದೊಂದಿಗೆ ಮೆರವಣಿಗೆಯಲ್ಲಿ ರಥಬೀದಿಯಲ್ಲಿ ಸಾಗಿ ದೇವಸ್ಥಾನದ ಮುಖದ್ವಾರಕ್ಕೆ ಮೆರವಣಿಗೆಯು ಸಾಗಿ ಬಂದಾಗ ದೇವಳದ ಆಡಳಿತಮಂಡಳಿ ಸ್ವಾಗತಿಸಿತು. ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯತಂತ್ರಿ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ರಾಮ್ ಭಟ್, ಪರಮೇಶ್ವರ ಭಟ್, ಮಾಧವ ಮಯ್ಯ, ವಿಷ್ಣುಮೂರ್ತಿ ಭಟ್, ಆಡಳಿತ ಮೊಕ್ತೇಸರ ಅಮ್ಮುಂಜೆಗುತ್ತು ಡಾ, ಮಂಜಯ್ಯ ಶೆಟ್ಟಿ,ಮುಕ್ತೇಸರರಾದ ಯು. ತಾರನಾಥ ಆಳ್ವ, ಚೇರಾ ಸೂರ್ಯನಾರಾಯಣ ರಾವ್, ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ದೇವಾಡಿಗ ಸಮಾಜ ಶ್ರೀ ಪೊಳಲಿ ಷಷ್ಠಿರಥ ಸಮರ್ಪಣಾ ಸಮಿತಿಯ ಅಧ್ಯಕ್ಷ ರಾಮ್‌ದಾಸ್ ಬಂಟ್ವಾಳ ,ಗೌರವಾಧ್ಯಕ್ಷ ಗೋಪಾಲ ಎಂ. ಮೊಲಿ, ಪ್ರ.ಕಾರ್ಯದರ್ಶಿ ಪ್ರವೀಣ್ ಬಿ.ತುಂಬೆ, ಕೋಶಾಧಿಕಾರಿ ನಾಗೇಶ್ ದೇವಾಡಿಗ ಪೊಳಲಿ ಮತ್ತು ವಿವಿಧ ಸಮಿತಿ ಪದಾಧಿಕಾರಿಗಳು ಸಮಾಜದ ಬಾಂಧವರು, ಸಾವಿರ ಸೀಮೇಯ ಭಕ್ತಾಧಿಗಳು ಉಪಸ್ಥಿತರಿದ್ದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...