ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ವಕೀಲರ ಸಂಘದ ವತಿಯಿಂದ ಧ್ವನಿವರ್ಧಕ ಬಳಸಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಇಂದು ಬಿಸಿರೋಡಿನ ನ್ಯಾಯಲಯದ ಮುಂದೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸೀನಿಯರ್ ಸಿವಿಲ್ ಜಡ್ಜ್ ಮಹಮ್ಮದ್ ಇಂಮ್ತಿಯಾಜ್, ಸಿವಿಲ್ ಜಡ್ಜ್ ಶಿಲ್ಪಾ, ಪ್ರಿನ್ಸಿಪಲ್ ಸಿವಿಲ್ ಜಡ್ಜ್ ರಮ್ಯಾ, ತಾಲೂಕು ತಹಶೀಲ್ದಾರ್ ರಶ್ಮಿ ಎಸ್.ಆರ್., ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಹಾಗೂ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು.