ಬೆಂಗಳೂರು : ಮಾರಕ ಕೊರೊನಾ ವೈರಸ್ ರಾಜ್ಯದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮೇ.3ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದ್ದು, ಸರ್ಕಾರ ಬಡವರಿಗಾಗಿ ಪೂರೈಸಲಾಗುತ್ತಿರುವ ಉಚಿತ ಹಾಲು ವಿತರಣೆಯನ್ನು ಏ.30ರವರೆಗೆ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ.
ಈ ಕುರಿತು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ರಾಜ್ಯದಲ್ಲಿ ಬಡವರಿಗೆ ಉಚಿತವಾಗಿ ನೀಡುತ್ತಿರುವ ಹಾಲು ವಿತರಣೆಯನ್ನು ಏ.30ರವರೆಗೆ ಮುಂದುವರೆಸಲು ತೀರ್ಮಾನಿಸಲಾಯಿತು. ಕೆಎಂಎಫ್ ನಿಂದ ಪ್ರತಿನಿತ್ಯ 7 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲನ್ನು ಸರ್ಕಾರವೇ ಖರೀದಿಸಿ, ಆ ಪ್ರದೇಶ ವ್ಯಾಪ್ತಿಯ ಕೊಳಚೆ ಪ್ರದೇಶದ ನಿವಾಸಿಗಳು ಹಾಗೂ ಬಡವರಿಗೆ ಉಚಿತವಾಗಿ ನೀಡಲಾಗುತ್ತಿದೆ. ಸದ್ಯ ಲಾಕ್ ಡೌನ್ ವಿಸ್ತರಿಸಿರುವ ಕಾರಣ ಹಾಲು ವಿತರಣೆಯನ್ನು ಏ.30ರವರೆಗೆ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬಡವರಿಗೆ ಹಾಲು ವಿತರಣೆಯಲ್ಲಿ ಯಾವುದೇ ಕೊರತೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.