ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ವ್ಯಾಪ್ತಿಯ ಯಕ್ಷಗಾನ ಕಲಾವಿದರಿಗೆ ಶನಿವಾರ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಅಕ್ಕಿ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಶ್ರೀ ಕ್ಷೇತ್ರ ಬಾಚಕೆರೆಯ ಧರ್ಮದರ್ಶಿ ದೇಜಪ್ಪ ಬಾಚಕೆರೆ, ಸರಪಾಡಿ ಘಟಕದ ಗೌರವಾಧ್ಯಕ್ಷ ಡಾ.ಬಾಲಚಂದ್ರ ಶೆಟ್ಟಿ ಮೀಯಾರು, ಅಧ್ಯಕ್ಷ ಶಶಿಕಾಂತ ಶೆಟ್ಟಿ ಆರುಮುಡಿ, ಸದಸ್ಯರಾದ ರಾಧಾಕೃಷ್ಣ ರೈ ಕೊಟ್ಟುಂಜ, ಉಮೇಶ್ ಆಳ್ವ ಕೊಟ್ಟುಂಜ, ಸಂತೋಷ್ ಶೆಟ್ಟಿ ಪಡ್ಡಾಯಿಬೆಟ್ಟು, ನಿರಂಜನ್ ಬಾಚಕೆರೆ, ಗಿರಿನಾಥ್ ಶರ್ಮ ಬಾಚಕೆರೆ ಮೊದಲಾದವರಿದ್ದರು.