Sunday, April 7, 2024

ಕಲ್ಲಡ್ಕ ಬೀದಿ ಬದಿ ವ್ಯಾಪಾರಿಗಳನ್ನು ಓಡಿಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್

ಬಂಟ್ವಾಳ: ರಾಜ್ಯದಲ್ಲಿ ಸಂತೆಯ ರೂಪದಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದರು ಕೂಡಾ ದ.ಕ.ಜಿಲ್ಲೆಯ ಲ್ಲಿ ನಿರಾತಂಕ ವಾಗಿ ಬೀದಿ ಬದಿ ವ್ಯಾಪಾರ ಗಳು ನಡೆಯುತ್ತಾ ಇದೆ. ಈ ರೀತಿಯ ವ್ಯಾಪಾರ ದಿಂದಾಗಿ ಸೊಂಕು ಹರಡುವ ಲಕ್ಷಣಗಳು ಹೆಚ್ಚು ಇರುತ್ತದೆ ಎಂದು ಹೇಳಿದರು ಜನ ಕೇಳುವ ಸ್ಥಿತಿಯಲ್ಲಿ ಇಲ್ಲ, ಬೀದಿಬದಿ ವ್ಯಾಪಾರ ಗಳು ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ, ಪೋಲೀಸ್ ಅಧಿಕಾರಿಗಳು ಇವರನ್ನು ಓಡಿಸುತ್ತಲೇ ಇದ್ದಾರೆ.
ಗುರುವಾರ ಕೈಕಂಬದಲ್ಲಿ ಬೀದಿಯಲ್ಲಿ ತರಕಾರಿ ಅಂಗಡಿಗಳ ಜೊತೆಯಲ್ಲಿ ದಿನಸಿ ಸಾಮಾಗ್ರಿಗಳು, ಒಣ ಮೀನು ಗಳು ಹೀಗೆ ಎಲ್ಲವನ್ನೂ ಮಾರಟ ಮಾಡಲು ಆರಂಭಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೋಲೀಸರು ತೆರವುಗೊಳಿಸಿದ್ದರು. ಆದರೆ ಮತ್ತೆ ಅದೇ ರೀತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬಿಸಿರೋಡಿನ ಕೈಕಂಬ ದಲ್ಲಿ ವ್ಯಾಪಾರ ಮಾಡುವ ದೃಶ್ಯಗಳು ಇಲ್ಲಿ ಕಾಣಸಿಗುತ್ತವೆ.

ಕಲ್ಲಡ್ಕ ಬೀದಿ ಬದಿ ವ್ಯಾಪಾರಿಗಳನ್ನು ಓಡಿಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೇತ್ರತ್ವದ ಪೋಲೀಸ್ ತಂಡ

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕಲ್ಲಡ್ಕ ಪೇಟೆಯಲ್ಲಿ ಬೀದಿಬದಿಯಲ್ಲಿ ಮಾರಾಟ ಜೋರಾಗಿ ನಡೆಯುತ್ತಿತ್ತು.ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಯ ನಿರ್ಲಕ್ಷ್ಯದಿಂದ ಸೊಂಕು ಹರಡುವ ಲಕ್ಷಣಗಳು ಹೆಚ್ಚು ಇರುವುದರಿಂದ ಪೋಲೀಸರು ಅವರನ್ನು ತೆರವುಗೊಳಿಸಿದರು.
ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಲ್ಲಿಯೂ ಹೆಚ್ಚಿನ ಮುಂಜಾಗ್ರತೆ ಅಗತ್ಯ.
ಹಾಗಾಗಿ ಹೆಚ್ಚಿನ ಜಾಗೃತಿ ಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ಬೀದಿ ಬದಿಯ ಜೊತೆ ಜನಸೇರುವ ಯಾವುದೇ ವ್ಯಾಪಾರ ಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅಧಿಕಾರಿಗಳ ಮಾತಿಗೆ ಬೆಲೆ ಕೊಡದೆ ತಿರುಗಾಟ ನಡೆಸಿದರೆ , ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವಹಿವಾಟು ನಡೆಸಿದರೆ ದ.ಕ.ಜಿಲ್ಲೆಯೂ ಸೀಲ್ ಡೌನ್ ಅಗುವುದರಲ್ಲಿ ಸಂಶಯವಿಲ್ಲ. ಏನೇ ಇರಲಿ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರಕಾರದ ಅದೇಶವನ್ನು ನೀವು ನಾವು ಪಾಲಿಸಲೇಬೇಕಾಗಿದೆ.
ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು ಗುಂಪು ಸೇರುವ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶವನ್ನು ಬಂಟ್ವಾಳ ತಾಲೂಕಿನ ಅಧಿಕಾರಿಗಳು ನೀಡಲೇ ಬಾರದು ಎಂಬುದು ಸಾರ್ವಜನಿಕ ಒತ್ತಾಯವಾಗಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...