Saturday, April 6, 2024

ವೈನ್ಸ್ ಅಂಗಡಿ ಶಟರ್ ಮುರಿದು ಲಕ್ಷಾಂತರ ಬೆಲೆಯ ಮದ್ಯ ಕಳವು

ಉಳ್ಳಾಲ : ಎಂಎಸ್ ಐಎಲ್ ನ ವೈನ್ಸ್ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು 1ಲಕ್ಷ ಮೌಲ್ಯದ ಮದ್ಯವನ್ನು ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಪುರುಷೋತ್ತಮ್ ಪಿಲಾರ್ ಅವರಿಗೆ ಸೇರಿದ ವೈನ್ಸ್ ಅಂಗಡಿಯಲ್ಲಿ ಕಳವು ನಡೆದಿದೆ. ಶಟರ್ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಡಿಮೆ ಬೆಲೆಯ ಮದ್ಯ ಸೇರಿದಂತೆ ಅಧಿಕ ಬೆಲೆಯ ಮದ್ಯದ ಬಾಟಲಿಗಳನ್ನು ದರೋಡೆಗೈದಿದ್ದಾರೆ. ತಮ್ಮ ಕೃತ್ಯ ಹೊರಗೆ ಯಾರಿಗೂ ಕಾಣಿಸದಂತೆ ಅಂಗಡಿ ಎದುರು ಬಟ್ಟೆಯನ್ನು ಕಟ್ಟಿ ಶಟರ್ ಬಾಗಿಲನ್ನು ಮುರಿದಿದ್ದಾರೆ.

ಡಿವಿಆರ್ ನ್ನೇ ಕಳವುಗೈದರು !
ವೈನ್ಸ್ ಅಂಗಡಿಯೊಳಕ್ಕೆ ಸಿಸಿಟಿವಿ ಅಳವಡಿಸಲಾಗಿದೆ. ಆದರೆ ಚಾಣಾಕ್ಷತನ ತೋರಿಸಿರುವ ಕಳ್ಳರು ಸಿಸಿಟಿವಿ ದಾಖಲೆ ಹೊಂದಿರುವ ಡಿವಿಆರ್ ನ್ನೂ ಕೂಡ ಕಳವು ನಡೆಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮುಗಿಬಿದ್ದರು!
ಅಂಗಡಿಯ ಶಟರ್ ತೆರೆಯುವುದನ್ನು ಕಂಡ ರಸ್ತೆಯಲ್ಲಿ ಸಂಚರಿಸುವ ಮಂದಿ ವೈನ್ಸ್ ಅಂಗಡಿ ತೆರೆದಿರುವುದೆಂದು ಭಾವಿಸಿ, ಮದ್ಯ ನೀಡುವಂತೆ ಕೇಳಿಕೊಳ್ಳುತ್ತಿರುವ ದೃಶ್ಯ ಸ್ಥಳದಲ್ಲಿ ಕಂಡುು ಬಂತು. ದ್ವಿಚಕ್ರ ವಾಹನಗಳಲ್ಲಿ ಕೆಲವರು ಬಂದರೆ, ಇನ್ನು ಕೆಲವರು ಕಾರಿನಲ್ಲಿ ಬಂದು ಮದ್ಯ ಕೇಳಿ ಪೊಲೀಸರಿಂದ ಉಗಿಸಿಕೊಂಡರು.

ಪಾನ್ ಅಂಗಡಿಯಿಂದಲೂ ಕಳವು
ವೈನ್ಸ್ ಅಂಗಡಿ ಸಮೀಪದಲ್ಲೇ ಇರುವ ಪಾನ್ ಅಂಗಡಿಯಿಂದ 10 ಪ್ಯಾಕೆಟ್ ಸಿಗರೇಟುಗಳನ್ನು ಕಳ್ಳರು ಕಳವುಗೈದಿದ್ದಾರೆ. ಮೂರು ವರ್ಷದಲ್ಲಿ 10ನೇ ಬಾರಿ ಇದೇ ರೀತಿಯಲ್ಲಿ ಕಳವು ನಡೆಯುತ್ತಿದೆ ಎಂದು ಪಾನ್ ವಾಲಾ ಪೊಲೀಸರಲ್ಲಿ ಹೇಳಿಕೊಂಡಿದ್ದಾನೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...