Monday, October 23, 2023

ಸ್ಥಳೀಯರಿಗೆ ತೊಂದರೆ ಯಾಗದ ರೀತಿಯಲ್ಲಿ ಕಾಮಗಾರಿ ನಡೆಸಿ: ಶಾಸಕ ರಾಜೇಶ್ ನಾಯ್ಕ್

Must read

ಬಂಟ್ವಾಳ: ಬಂಟ್ವಾಳ ಬೈಪಾಸು ಬಳಿ ರಸ್ತೆ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಬಿ.ಸಿ.ರೋಡು ಮತ್ತು ಪಾಣೆಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯು ತುಂಡಾಗಿದ್ದು ದುರಸ್ತಿ ಕಾರ್ಯ ನಡೆಯುತ್ತಿದೆ. ನಿನ್ನೆ ಸಂಜೆಯಿಂದ ದುರಸ್ತಿ ಕಾರ್ಯ ನಡೆಯುತ್ತಿದ್ದು ಈ ದಿನ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳ್ಳಿಪ್ಪಾಡಿ ಬೇಟಿ ನೀಡಿ ಕೊಳವೆ ಶೀಘ್ರ ದುರಸ್ತಿಗೊಳಿಸಿ ನೀರು ಸರಬರಾಜು ವ್ಯವಸ್ಥೆ ಗೊಳಿಸುವಂತೆ ಸೂಚಿಸಿದರು.

ಇಂತಹ ಪ್ರದೇಶದಲ್ಲಿ ತಡೆಗೋಡೆ ಹಾಗೂ ಚರಂಡಿ ಕಾಮಗಾರಿ ನಡೆಸಿ ಸ್ಥಳೀಯರಿಗೆ ತೊಂದರೆಯಾಗದ ರೀತಿ ರಸ್ತೆ ಕಾಮಗಾರಿ ನಡೆಸುವಂತೆ ತಿಳಿಸಿದರು.
ಈ ಸಂಧರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ , ಸ್ಥಳೀಯ ಪುರಸಭೆಯ ಸದಸ್ಯ ಹರಿಪ್ರಸಾದ್, ಬೂಡ ಸದಸ್ಯ ಬಾಸ್ಕರ ಟೈಲರ್, ಅರ್ಕಮೆ ನರಸಿಂಹ ಮಯ್ಯ, ಸ್ಥಳೀಯರು ರಸ್ತೆ ಕಾಮಗಾರಿ ಮೇಲ್ವಿಚಾರಕರು ಉಪಸ್ಥಿತರಿದ್ದರು.

More articles

Latest article