Saturday, April 6, 2024

ಸೀಲ್ ಡೌನ್ ಏರಿಯಾದಲ್ಲಿ ಬಿಜೆಪಿ ಮುಖಂಡನ ರಂಪಾಟ: ಮಾಜಿ ಸಚಿವ ಬಿ.ರಮಾನಾಥ ರೈ ಆರೋಪ

ಬಂಟ್ವಾಳ: ಸೀಲ್ ಡೌನ್ ಏರಿಯಾದಲ್ಲಿ ಬಿಜೆಪಿ ಮುಖಂಡನ ರಂಪಾಟ ಮಾಡಿದ್ದಾರೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿಕೆ ನೀಡಿದ್ದಾರೆ.

ಬಂಟ್ವಾಳ ಪೇಟೆಯಲ್ಲಿ ಸೀಲ್ ಡೌನ್ ವಾಪಸ್ಸು ಪಡೆಯಬೇಕೆಂಬ ಬೇಡಿಕೆ ಇದೆ. ಇದಕ್ಕೂ ಮೊದಲು ನಾನು ಒಂದು ಸಲ ಸೀಲ್ ಡೌನ್ ವ್ಯಾಪ್ತಿಯ ಹೊರಗಡೆ ಸಾಂತ್ವನ ಹೇಳಲು ಹೋಗಿದ್ದೆ ಅದ್ರೆ ಸೀಲ್ ಡೌನ್ ಏರಿಯದೊಳಗೆ ಹೋಗಿಲ್ಲ ಅದ್ರೆ ಅದನ್ನು ಬಿಜೆಪಿ ಮುಖಂಡರು, ಕಾರ್ಯಕರ್ತರು ಕಸಬಾ ಗ್ರಾಮದ ಸೀಲ್ ಡೌನ್ ಏರಿಯಾದೊಳಗೆ ಹೋಗಿ ಗಲಾಟೆ ಮಾಡಿದ್ದಾರೆ ಎಂದು ನನ್ನ ಮೇಲೆ ಆರೋಪ ಮಾಡಿದ್ದರು.

ಅವತ್ತು ನನಗೆ ವಿರೋಧ ವ್ಯಕ್ತಪಡಿಸಿದ ಇವರು ಇವತ್ತು ಸೀಲ್ ಡೌನ್ ಒಳಗೆ ಹೋಗಿ ಗಲಾಟೆ ಮಾಡಿದ್ದು ಸರಿನಾ? ಎಂದು ಅವರು ಪ್ರಶ್ನಿಸಿದರು.

ಅಧಿಕಾರಿಗಳು, ಪೊಲೀಸರ ಮಧ್ಯೆ ಗಲಾಟೆ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು. ನಾನು ಹೋಗಿರುವ ಸಂದರ್ಭದಲ್ಲಿ ರಾಜಕೀಯ ಮಾಡಿ ನನ್ನ ವಿರುದ್ಧ ಅರೋಪ ಮಾಡಿದವರು ಇವತ್ತು ಏನು ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಜಿಲ್ಲಾಡಳಿತ ಈ ಬಗ್ಗೆ ಪರಿಶೀಲನೆ ನಡೆಸಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಒತ್ತಾಯಿಸಿದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...