Saturday, October 21, 2023

ಚಾರ್ಮಾಡಿ ದಿನಸಿ ಸಾಮಾಗ್ರಿಗಳ ಕಿಟ್ ಹಾಗೂ ಸಹಾಯಧನ ಹಸ್ತಾಂತರ

Must read

ಬೆಳ್ತಂಗಡಿ: ಕಳೆದ ಕೆಲ ತಿಂಗಳ ಹಿಂದೆ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಚಾರ್ಮಾಡಿ ಗ್ರಾಮದ ನಿವಾಸಿಗಳು ಈ ಭಾರಿ ಕೋವಿಡ್ 19 ನಿಂದ ಮತ್ತಷ್ಟು ತೊಂದರೆಗೊಳಗಾದ ಕುಟುಂಬಗಳಿಗೆ ಬೆಳ್ತಂಗಡಿ ಯುವವಾಹಿನಿ(ರಿ.) ಘಟಕದ ಮನವಿ ಮೇರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ನೀಡಿರುವ ಅಕ್ಕಿಯನ್ನು ಮತ್ತು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.)ದಿಂದ ನೀಡಿರುವ ದಿನಸಿ ಸಾಮಾಗ್ರಿಗಳ ಕಿಟ್ ಗಳನ್ನು ಹಾಗೂ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟ ದಿ.ಅಮ್ಮಿ ಪೂಜಾರಿ ಬಿಟೀಗೆ ಇವರ ಮಗಳ ಮದುವೆಗೆ ಬೆಳ್ತಂಗಡಿ ಯುವವಾಹಿನಿ(ರಿ.) ಘಟಕದಿಂದ ನೀಡಿರುವ ಸಹಾಯಧನವನ್ನು ಇಂದು ಹಸ್ತಾಂತರಿಸಲಾಯಿತು.

3

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.)ದ ಉಪಾಧ್ಯಕ್ಷ ಮನೋಹರ್ ಕುಮಾರ್ ಇಳಂತಿಲ, ಯುವವಾಹಿನಿ(ರಿ.)ಕೇಂದ್ರ ಸಮಿತಿಯ ನಿರ್ದೇಶಕ ಪ್ರಶಾಂತ್ ಮಚ್ಚಿನ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ನಿರ್ದೇಶಕ ದಯಾನಂದ ಪೊಂರ್ಗದಡಿ, ಯುವವಾಹಿನಿ(ರಿ.)ಕೇಂದ್ರ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಯಶೋಧರ ಚಾರ್ಮಾಡಿ, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿ ಅಧ್ಯಕ್ಷ ನಾರಾಯಣ ಪೂಜಾರಿ, ಉಜಿರೆ ಜಿಲ್ಲಾ ಪಂಚಾಯತ್ ಸದಸ್ಯೆ ನಮಿತ, ಯುವವಾಹಿನಿ ಬೆಳ್ತಂಗಡಿ ಘಟಕದ ಸಲಹೆಗಾರ ಹರೀಶ್ ಬರಮೇಲು ಉಪಸ್ಥಿತರಿದ್ದರು.

ಅಶೋಕ ವರಸಾರಿ ಕಾರ್ಯಕ್ರಮ ನಿರೂಪಿಸಿದರು.

More articles

Latest article