Friday, April 19, 2024

ಹೆಬ್ರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಉಮರ್ ಫಾರೂಕ್ ಫರಂಗಿಪೇಟೆ ನೇಮಕ

ಮಂಗಳೂರು: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಗಿರುವ ಉಮರ್ ಫಾರೂಕ್ ಫರಂಗಿಪೇಟೆ ಅವರನ್ನು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಸ್ತುವಾರಿಯಾಗಿ ನೇಮಿಸಿ ಕೆಪಿಸಿಸಿ ಅದೇಶ ಹೊರಡಿಸಿದೆ.

ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಪಡಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಉಸ್ತುವಾರಿಗಳನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಉಮರ್ ಫಾರೂಕ್ ಫರಂಗಿಪೇಟೆ ನೇಮಕ ಆಗಿದ್ದಾರೆ.

 

More from the blog

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...