Wednesday, April 10, 2024

ಶಾಸಕ ಯು.ಟಿ.ಖಾದರ್ ರವರ ಸಲಹೆಯ ಮೇರೆಗೆ ಕಿನ್ಸ್ ಫೌಂಡೇಶನ್ ಸಂಸ್ಥೆಯಿಂದ ಆಹಾರ ವಿತರಣೆ

ಕಿನ್ಸ್ ಫೌಂಡೇಶನ್ ಸಂಸ್ಥೆಯ ಅಲ್ತಾಫ್ ಉಳ್ಳಾಲರವರ ಸಹಕಾರದೊಂದಿಗೆ ಹಾಗೂ ಶಾಸಕ ಯು.ಟಿ.ಖಾದರ್ ರವರ ಸಲಹೆಯ ಮೇರೆಗೆ ಸುಮಾರು 1200 ವಲಸೆ ಕಾರ್ಮಿಕರಿಗೆ ನಿನ್ನೆ ಮತ್ತು ಇವತ್ತು ಆಹಾರ ಮತ್ತು ಬೆಳಗಿನ ಉಪಹಾರವನ್ನು ಬಂಟ್ವಾಳ ಬಂಟರ ಭವನದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್ ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸಜೀಪ ಮುನ್ನೂರು ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪುದು ವಲಯ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಪೆರಿಮಾರ್,  ಮುಡಿಪು ಬ್ಲಾಕ್ ಅಧ್ಯಕ್ಷ ಇಂತಿಯಾಜ್ ತುಂಬೆ, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಇಕ್ಬಾಲ್ ಸುಜೀರ್ ಜಹೀರ್ ಕುಂಪನಮಾಜಲ್ ರಿಯಾಜ್ ಕುಂಪನಮಾಜಲ್ ಮಹಮ್ಮದ್ ಮೋನು ಫರಂಗಿಪೇಟೆ ಹಾಗೂ ಲತೀಫ್ ಅರಫ,  ಪ್ರಕಾಶ್ ಶೆಟ್ಟಿ ತುಂಬೆ,  ಕಾಶಿಂ ಶಾಂತಿಅಂಗಡಿ,  ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೌಕತ್ಆಲಿ ಪಾಡಿ, ಯುವ ಕಾಂಗ್ರೆಸ್ ಸದಸ್ಯರಾದ ಮಜೀದ್ ಪೇರಿಮರ್ ಇಸ್ಮಾಯಿಲ್ ಕುಂಜತ್ಕಲ್ ಅಶ್ವದ್ ಫರಂಗಿಪೇಟೆ ಆಶಿಮ್ ಮಾರಿಪಳ್ಳ ಜಹೀರ್ ಮಾರಿಪಳ್ಳ ಅಶ್ರಫ್ ಮಲ್ಲಿ ಇಮ್ರಾನ್ ಮಾರಿಪಳ್ಳ ಹಾಗೂ ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್.ಬಂಟ್ವಾಳ ಗ್ರಾಮಾಂತರ ಠಾಣೆಯ ಎಸೈ ಪ್ರಸನ್ನಕುಮಾರ್ ಬಂಟ್ವಾಳ ನಗರ ಠಾಣೆಯ ಎಸೈ ಅವಿನಾಶ್ ಹಾಗೂ ಮುಂತಾದವರು ಉಪಸ್ಥಿತಿದ್ದರು.

 

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...