Friday, October 27, 2023

ಬಂಟ್ವಾಳ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆಯಾಗುವುದನ್ನು ತಡೆಯುವಂತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಅವರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Must read

 

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಮುಖ್ಯವಾಗಿ ಮಣಿನಾಲ್ಕೂರು , ಕಡೇಶ್ವಾಲ್ಯ,ಕರ್ಪೆ ಪ್ರದೇಶದಲ್ಲಿ ವ್ಯಾಪಕವಾದ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿದೆ . ಕಡೇಶ್ವಾಲ್ಯದಲ್ಲಿ ಮರಳುಗಾರಿಕೆ ಪಡೆದ ಗುತ್ತಿಗೆದಾರರೊಬ್ಬರು ಇತರ ಕಡೆಗಳಲ್ಲಿ ಅಕ್ರಮ ಮರಳುಗಾರಿಕೆಗೆ ಸಹಕರಿಸುತ್ತಿದ್ದು ಅವರ ಮೂಲಕ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ .

ರಾಜಾರೋಷವಾಗಿ ಈ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಗಣಿಗಾರಿಕಾ ಇಲಾಖೆ , ಕಂದಾಯ ಇಲಾಖೆ , ಪೊಲೀಸ್ ಇಲಾಖೆ ಇದನ್ನು ನಿಯಂತ್ರಣ ಮಾಡಲು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಅನೇಕ ಭಾರೀ ಸಂಬಂಧಪಟ್ಟವರಿಗೆ ತಿಳಿಸಿದರೂ ರಾಜಕೀಯ ಪ್ರಭಾವದಿಂದ ಇವರ ಬಗ್ಗೆ ಕ್ರಮ ಕೈಗೊಳ್ಳಲು ಇಲಾಖೆಯು ನಿಷ್ಕ್ರಿಯವಾಗಿದ್ದಾರೆ. ಅಕ್ರಮ ಮರಳುಗಾರಿಕೆ ದಂಧೆ ಮಾಡುವ ವ್ಯಕ್ತಿಗಳು ಕ್ಷೇತ್ರದ ಶಾಸಕರ ನಿಕಟವರ್ತಿಗಳಾಗಿದ್ದು ಅವರ ಒತ್ತಡದಿಂದಾಗಿ ಇಲಾಖೆಯು ಕ್ರಮ ಕೈಗೊಳ್ಳುತ್ತಿಲ್ಲ. ಈ ಸಂಬಂದ್ಧವಾಗಿ ಸರಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ . ಇದನ್ನು ತಡೆಗಟ್ಟುವರೇ. ಮಾನ್ಯ ಜಿಲ್ಲಾಧಿಕಾರಿಗಳಾದ ತಾವು ನಿಸ್ಪಕ್ಷಪಾತವಾಗಿ ಅಗತ್ಯವಾದ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ನಾವುಗಳು ಒತ್ತಾಯ ಮಾಡುತ್ತಿದ್ದೇವೆ . ಇದರ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ವಿನಂತಿಸಿಕೊಂಡರು.

More articles

Latest article