Monday, April 8, 2024

ಮೂಕ ಪ್ರಾಣಿಯ ಹತ್ಯೆಗೈದ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ

ಕೇರಳ : ಅನನಾಸಿನಲ್ಲಿ ಪಟಾಕಿ ಇಟ್ಟು ಗರ್ಭಿಣಿ ಆನೆಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಕೆಲಸ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜನತೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ ನೀಡಿದ್ದು, ಈಗಾಗಲೇ ದುಷ್ಟರ ಪತ್ತೆಗೆ ಉನ್ನತ ಮಟ್ಟದ ತಂಡವೊಂದನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
​ಕೇರಳದ ಚೀಫ್​ ವೈಲ್ಡ್​ಲೈಫ್​ ವಾರ್ಡನ್​ ಸುರೇಂದ್ರ ಕುಮಾರ್​ ಈ ಬಗ್ಗೆ ಪ್ರತಿಕ್ರಿಯಿಸಿ,
ಇದೊಂದು ಉದ್ದೇಶಪೂರ್ವಕ ಕೃತ್ಯ, ಗರ್ಭಿಣಿ ಆನೆಯನ್ನು ಹತ್ಯೆ ಮಾಡಿದ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ದುಷ್ಟರ ಬಂಧನ ಆಗೋವರೆಗೂ ನಮಗೆ ನೆಮ್ಮದಿ ಇಲ್ಲ. ಎಲ್ಲರೂ ಅವರ ಬಂಧನದ ಸುದ್ದಿಯನ್ನು ಶೀಘ್ರದಲ್ಲೇ ಕೇಳುತ್ತೀರಿ ಎಂದು ಆಶ್ವಾಸನೆ ನೀಡಿದರು.
ಮಲಪ್ಪುರಂ ಜಿಲ್ಲೆಯ ಸೈಲೆಂಟ್​ ವ್ಯಾಲಿಯಲ್ಲಿ ಆಹಾರ ಹುಡುಕುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿದ್ದ ಗರ್ಭಿಣಿ ಆನೆಗೆ ಕೆಲ ಕಿಡಿಗೇಡಿಗಳು ಅನಾನಸು ಹಣ್ಣಿನಲ್ಲಿ ಪಟಾಕಿ ತುಂಬಿ ತಿನ್ನಲು ಕೊಟ್ಟು ಅನೆಯ ಬಾಯಿ ಸಿಡಿಯುವಂತೆ ಮಾಡಿದ್ದರು. ನೋವು ತಾಳಲಾರದ ಆನೆ ಯಾರಿಗೂ ಹಾನಿ ಮಾಡದೆ ಪಕ್ಕದಲ್ಲೇ ಹರಿಯುವ ನದಿ ನೀರಿನಲ್ಲಿ ನಿಂತು ಪ್ರಾಣ ಬಿಟ್ಟಿತ್ತು. ಈ ಘಟನೆ ಬಗ್ಗೆ ಅರಣ್ಯ ಅಧಿಕಾರಿ ಮೋಹನ್ ಕೃಷ್ಣನ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ವೈರಲ್ ಆಗಿ ದೇಶಾದ್ಯಂತ ಗರ್ಭಿಣಿ ಆನೆ ಸಾವಿಗೆ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...