Tuesday, April 9, 2024

ಶ್ರೀ ಮುರುಘೇಂದ್ರ ಮಿತ್ರ ಮಂಡಳಿ: ವಿಶ್ವ ಯೋಗ ದಿನಾಚರಣೆ, ಹುತಾತ್ಮ ಯೋಧರಿಗೆ ನಮನ

 

ಬಂಟ್ವಾಳ: ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಮತ್ತು ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಗಾಲ್ವಾನ್ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಶ್ರೀ ಮುರುಘೇಂದ್ರ ಸಭಾಭವನದಲ್ಲಿ ನಡೆಯಿತು.
ಯೋಗ ಗುರು, ನಿವೃತ್ತ ದೈಹಿಕ ಶಿಕ್ಷಕ ರಮೇಶ್ ಮೂಲ್ಯ ಯೋಗದ ಮಹತ್ವದ ಬಗ್ಗೆ ಮಾಹಿತಿ ನೀಡಿ, ಯೋಗಾಸನ ನಡೆಸಿಕೊಟ್ಟರು. ನಿವೃತ್ತ ಯೋಧ ಕಾಂತಪ್ಪ ಗೌಡ ಅವರು ಮುಖ್ಯ ಅತಿಥಿಯಾಗಿ ಹುತಾತ್ಮ ಯೋಧರಿಗೆ ನುಡಿ ನಮನ ಸಲ್ಲಿಸಿದರು.

ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಕುಮಂಗಿಲ, ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಮುಖ್ಯ ಕಾರ್ಯ ನಿರ್ವಹಣಾಽಕಾರಿ ಮಂಜಪ್ಪ ಮೂಲ್ಯ, ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷ ಮೋಹನ ಸಾಲ್ಯಾನ್, ಕಾಂತಪ್ಪ ಟೈಲರ್, ಪ್ರಭಾಕರ ಪಿ.ಎಂ., ಹಾಗೂ ಸದಸ್ಯರು ಭಾಗವಹಿಸಿದ್ದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...