Tuesday, April 9, 2024

ಕುಕ್ಕೆ ಸುಬ್ರಹ್ಮಣ್ಯ ನ ಸನ್ನಿದಿಯಲ್ಲಿ ನೂರಾರು ಭಕ್ತರು

ಸುಬ್ರಹ್ಮಣ್ಯ : ಕೊರೊನಾ ಲಾಕ್‌ಡೌನ್‌ ಬಳಿಕ ಸೋಮವಾರದಿಂದ ದೇವಾಲಯಗಳು ತೆರೆದಿದ್ದು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆದಿ ಸುಬ್ರಹ್ಮಣ್ಯ ದೇವರ ದರ್ಶನವನ್ನು ನೂರಾರು ಭಕ್ತರು ಪಡೆಯುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್‌ ಕಾರಣದಿಂದಾಗಿ ಮಾರ್ಚ್‌ನಿಂದ ಎಲ್ಲಾ ದೇವಾಲಯ, ಮಸೀದಿ, ಚರ್ಚ್‌ಗಳು ಮುಚ್ಚಲಾಗಿದ್ದು ಇಂದಿನಿಂದ ರಾಜ್ಯದಲ್ಲಿ ದೇವಾಲಯಗಳು, ಚರ್ಚ್, ಮಸೀದಿಗಳು ತೆರೆಯಲು ಅವಕಾಶ ನೀಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಬೆಳಿಗ್ಗೆ 8.30ರ ಮಹಾಪೂಜೆಯ ಬಳಿಕ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು ಭಕ್ತಾಧಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು, ಸ್ಯಾನಿಟೈಸರ್ ಬಳಸಿ, ಮಾಸ್ಕ್ ಹಾಕಿ ದೇವರ ದರ್ಶನ ಪಡೆದಿದ್ದಾರೆ. ದೇವರ ದರ್ಶನ ಹೊರತುಪಡಿಸಿ, ಯಾವುದೇ ಪೂಜೆ, ಸೇವೆ, ಪ್ರಸಾದಕ್ಕೆ ಅವಕಾಶವಿರಲಿಲ್ಲ.

ಇಂದು ಬೆಳಿಗ್ಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಾಲಯಕ್ಕೂ ಭಕ್ತರು ಆಗಮಿಸಿದ್ದು, ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೂಡಾ ದೇವರ ದರ್ಶನ ಪಡೆದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...