ಬೆಳ್ತಂಗಡಿ: ತಾಲೂಕಿನ ಶಿರ್ಲಾಲು ಗ್ರಾಮದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಆತ್ಮಹತ್ಯೆ ಮಾಡಿದ ಮಹಿಳೆ ಶಿರ್ಲಾಲು ನಿವಾಸಿ ಚಂಚಲ ಎಂದು ತಿಳಿದುಬಂದಿದೆ. ಈಕೆ ಮದುವೆಯಾಗಿ ಒಂದು ಗಂಡು ಮಗು ಇದ್ದು, ಅಳದಂಗಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತಿದ್ದರು. ಇಂದು ತನ್ನ ಬಾಡಿಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಸಾವಿಗೆ ಇನ್ನು ಸರಿಯಾದ ಕಾರಣ ತಿಳಿದು ಬಂದಿಲ್ಲ.
ಮೃತರು ತಂದೆ ತಾಯಿ ಸಹೋದರಿಯರು ಪತಿ, ಗಂಡು ಮಗು ಹಾಗೂ ಕುಟುಂಬದವರನ್ನು ಅಗಲಿದ್ದಾರೆ.
ವೇಣೂರ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.