ಬಂಟ್ವಾಳ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಜು. 26 ರಂದು ಒಂದು ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲಿ ಪ್ರತಿ ಮನೆ ಮನೆಗಳಿಗೂ ಸಾಧನೆಯ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಸಂಕಷ್ಟ ಸವಾಲುಗಳ ನಡುವೆ ಸಂವೇದನೆ, ಸ್ಪಂದನೆ, ಸಾಧನೆ ಜನಹಿತದ ಕಾಳಜಿಯ ಸರಕಾರದ ಸಾಧನೆಯನ್ನು ಅರಿಯೋಣ ಮನೆಮನೆಗೆ ಸಾರೋಣ ಸಹಕಾರಿಗಳಾಗೋಣ ಅಭಿವೃದ್ಧಿಯೇ ಆಡಳಿತ ಮಂತ್ರ ಸಾಹಿತ್ಯ ಕರಪತ್ರವನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಈ ದಿನ ಬಂಟ್ವಾಳ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿಯವರು ಪಕ್ಷದ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕ್ಷೇತ್ರದ ಉಪಾಧ್ಯಕ್ಷ ಚಿದಾನಂದ ರೈ, ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ, ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು, ಪ್ರಮುಖರಾದ ರಂಜಿತ್ ಮೈರ, ಜಿನರಾಜ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.