ಬಂಟ್ವಾಳ: ರಾಜ್ಯದಲ್ಲಿ ಇಂದು 2313 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 33,418 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 57 ಜನ ಮೃತಪಟ್ಟಿದಾರೆ.
ಬೆಂಗಳೂರು ನಗರ 1,447 ಕೇಸ್ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ 139 ಕೇಸ್ ಪತ್ತೆಯಾಗಿದ್ದು, 8 ಮಂದಿ ಸೋಂಕಿತರ ಸಾವು ಸಂಭವಿಸಿದೆ. ವಿಜಯಪುರ 89, ಬಳ್ಳಾರಿ 66, ಕಲಬುರಗಿ 58, ಯಾದಗಿರಿ, ಮೈಸೂರು 51, ಧಾರವಾಡ 50, ಉಡುಪಿ 34 ಕೇಸ್ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಇಂದು ರಾಜ್ಯದಲ್ಲಿ 1003 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 13, 836 ಮಂದಿ ಗುಣಮುಖರಾದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.