Thursday, October 19, 2023

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಕೃಷಿ ಕಾರ್ಯ: ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರಿಂದ ಚಾಲನೆ

Must read

ಬಂಟ್ವಾಳ: ಬಾಳ್ತಿಲ ಗ್ರಾಮದ ಸುಧೆಕ್ಕಾರ್ ಎಂಬಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಪ್ರತೀ ವರ್ಷ ಭತ್ತದ ಕೃಷಿ ಕಾರ್‍ಯ ನಡೆಸಿಕೊಂಡು ಬರುತ್ತಿದ್ದು, ಈ ವರ್ಷ ಈ ಕೃಷಿ ಕಾರ್‍ಯವನ್ನು ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರು, ಅಭಿವೃದ್ದಿ ಸಮಿತಿ ಸದಸ್ಯರು, ಮಾತೃಭಾರತಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಊರಿನವರ ಸಹಕಾರದಿಂದ 7 ಎಕ್ರೆ ಭೂಮಿಯಲ್ಲಿ ಭತ್ತದ ಕೃಷಿ ಕಾರ್‍ಯವನ್ನು ನಡೆಸಲಾಯಿತು.


ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ನೇಜಿ ತೆಗೆಯುವ ಮೂಲಕ ಕೃಷಿ ಕಾರ್‍ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಎನ್., ಕೋಶಾಧಿಕಾರಿ ಸತೀಶ್ ಭಟ್ ಶಿವಗಿರಿ ಹಾಗೂ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿವಿದ್ಯಾಲಯದ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

More articles

Latest article