ಕಡಬ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಸಮೀಪ ನಡೆದಿದೆ.
ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.
ಜು.22ರಂದು ಬೆಳಿಗ್ಗೆ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.
ಈ ಬಗ್ಗೆ ಯುವತಿಯ ಮನೆಯವರು ಕಡಬ ಪೊಲೀಸರಿಗೆ ದೂರು ನೀಡಿದ್ದು ,ತನಿಖೆಯ ಬಳಿಕವಷ್ಟೇ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ತಿಳಿದು ಬರಲಿದೆ.