ಬಂಟ್ವಾಳ: ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಜು.10 ರಂದು ಬಂಟ್ವಾಳಕ್ಕೆ ಆಗಮಿಸಿ ಎಸೆಸೆಲ್ಸಿ ಪರೀಕ್ಷೆ ಯಶಸ್ಸಿನ ಹಿನ್ನೆಲೆಯಲ್ಲಿ ಪೊಳಲಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಹಿಂದೆ ಜಿಲ್ಲೆಗೆ ಆಗಮಿಸಿದ್ದ ಸಚಿವರು ಎಸೆಸೆಲ್ಸಿ ಪರೀಕ್ಷೆ ಯಶಸ್ವಿಯಾದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿಕೊಂಡಿದ್ದರು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದ್ದಾರೆ.
ಬೆಳಗ್ಗೆ 11ಕ್ಕೆ ಬಂಟ್ವಾಳಕ್ಕೆ ಆಗಮಿಸಲಿರುವ ಸಚಿವರು 12 ಗಂಟೆಗೆ ಪೊಳಲಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಜತೆಗೆ ಬಂಟ್ವಾಳದಲ್ಲಿ ಎಸೆಸೆಲ್ಸಿ ಪರೀಕ್ಷೆಯ ಯಶಸ್ವಿಗೆ ಶ್ರಮಿಸಿದವರಿಗೆ ಸಚಿವರು ಕೃತಜ್ಞತೆ ಅರ್ಪಿಸಲಿದ್ದಾರೆ.