Tuesday, October 17, 2023

ಪೊಲೀಸರ ಮೇಲೆ ಹಲ್ಲೆ ಖಂಡನೀಯ: ವಿಶ್ವ ಹಿಂದೂ ಪರಿಷತ್ ವಿಟ್ಲ ಪ್ರಖಂಡ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ

Must read

ಬಂಟ್ವಾಳ: ಬುಧವಾರ ರಾತ್ರಿ ಮೆಲ್ಕಾರ್ ನಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ರಾಡ್ ನಿಂದ ಹಲ್ಲೆ ನಡೆಸಿ, ಇಲಾಖಾ ವಾಹನ ಪುಡಿಗೈದು ಬಳಿಕ ಪೊಲೀಸರಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ಬಗ್ಗೆ ವಿಶ್ವ ಹಿಂದೂ ಪರಿಷತ್ ವಿಟ್ಲ ಪ್ರಖಂಡದ ಅಧ್ಯಕ್ಷ ಕೃಷ್ಣ ಪ್ಪ ಪೂಜಾರಿ ಕಲ್ಲಡ್ಕ, ಭಜರಂಗದಳ ವಿಟ್ಲ ಪ್ರಖಂಡದ ಸಂಚಾಲಕ ಮಿಥುನ್ ಪೂಜಾರಿ ಕಲ್ಲಡ್ಕ ಖಂಡನೆ ವ್ಯಕ್ತಪಡಿಸಿದ್ದಾರೆ.
ಕರ್ತವ್ಯ ಮಾಡುವ ಪೊಲೀಸರ ಮೇಲೆ ಹಲ್ಲೆ ನಡೆಸುವ ಮೂಲಕ ಅಧಿಕಾರಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಲು ಹೊರಟಿರುವ ಆರೋಪಿಯನ್ನು ಬಂಧಿಸಿ ಆತನ ಮೇಲೆ ಕಾನೂನು ಕ್ರಮಕ್ಕೆ ಇವರು ಒತ್ತಾಯಿಸಿದ್ದಾರೆ.

 

More articles

Latest article