Tuesday, April 23, 2024

ಅಪಘಾತ ಸ್ಪಾಟ್ ಆಗುತ್ತಿದೆಯಾ ಕೊಡಾಜೆ ಗಡಿ ಸ್ಥಳ..?

ಬಂಟ್ವಾಳ: ಮಾಣಿ- ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಗಡಿಸ್ಥಳದಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ರಸ್ತೆ ಅಪಘಾತಗಳು ಆಗುವ ಪ್ರದೇಶವಾಗಿ ಗೋಚರಿಸುತ್ತಿದೆ.
ಕಳೆದ ಕೆಲವು ತಿಂಗಳಲ್ಲಿ ಅನೇಕ ಅಪಘಾತ ನಡೆದಿದ್ದು , ಸ್ಪಾಟ್ ಡೆತ್ ಸಹಿತ ಅನೇಕ ಪ್ರಾಣ ಹಾನಿಯಾಗಿದೆ. ಜೊತೆಗೆ ಸುಮಾರು ಜನರು ಗಾಯಗೊಂಡಿದ್ದಾರೆ.

ಈಗಾಗಲೇ ಆ ರಸ್ತೆಯಲ್ಲಿ ಬ್ಯಾರಿಕೇಡ್ ಗಳನ್ನು ಇಡಲಾಗಿದೆ.
ಹೆದ್ದಾರಿ, ಸಾರಿಗೆ ಇಲಾಖೆ ಹಾಗೂ ಸ್ಥಳೀಯ ಆಡಳಿತ ಒಟ್ಟಾಗಿ ಅಲ್ಲಿ ರಸ್ತೆ ಅಪಘಾತ ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
ಅಪಘಾತ ತಡೆಯಲು ಆ ಪ್ರದೇಶದಲ್ಲಿ ಅಪಘಾತ ವಲಯದ ಬಗ್ಗೆ ಸೂಚನೆ, ಎಚ್ಚರಿಕೆ ಫಲಕಗಳನ್ನು ನಿರ್ಮಾಣ ಮಾಡುವುದು, ಅಪಘಾತ ವಲಯದ 50 ಮೀಟರ್ ವ್ಯಾಪ್ತಿಯಲ್ಲಿ ಸ್ಪೀಡ್ ಬ್ರೇಕರ್ ಹಂಪ್ ಗಳನ್ನು ನಿರ್ಮಾಣ ಮಾಡುವುದು ಇತ್ಯಾದಿ ಕ್ರಮಗಳನ್ನು ಕೈಕೊಳ್ಳುವುದು ಸೂಕ್ತ ಸಲಹೆ ಎನ್ನುವ ಅಭಿಪ್ರಾಯ ಸಾರ್ವಜನಿಕವಾಗಿ ಕೇಳಿಬರುತ್ತಿದೆ. ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಗಮನಹರಿಸಬೇಕಾಗಿದೆ.

More from the blog

ಬಿಜೆಪಿ ಪಕ್ಷದಿಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಉಚ್ಛಾಟನೆ

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಶಿಸ್ತು ಸಮಿತಿ ಸೋಮವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಅವರು ಸೋಮವಾರ ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ...

ವಿಟ್ಲ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್ ಹಾಗೂ ಶ್ರೀ ವಿಘ್ನೇಶ್ವರ ಸ್ಟೀಲ್ಸ್ ಸ್ವಂತ ಕಟ್ಟಡಕ್ಕೆ ಸ್ಥಳಾಂತರ 

ವಿಟ್ಲ: ಕಳೆದ ಹಲವಾರು ವರುಷಗಳಿಂದ ವಿಟ್ಲ - ಪುತ್ತೂರು ರಸ್ತೆಯ ಮೇಗಿನ ಪೇಟೆಯಲ್ಲಿ ವ್ಯವಹಾರ ನಡೆಸುತ್ತಿದ್ದ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್ ಹಾಗೂ ಶ್ರೀ ವಿಘ್ನೇಶ್ವರ ಸ್ಟೀಲ್ಸ್...

ಚುನಾವಣೆಯಲ್ಲಿ ಆಧಾರರಹಿತವಾಗಿ ಕಡಿಮೆ ಪ್ರಮಾಣದಲ್ಲಿ ಕುಲಾಲರ ಮತದಾರರ ಸಂಖ್ಯೆ ತೋರಿಸಿರುವುದು ಬೇಸರದ ವಿಚಾರ-ಸದಾಶಿವ ಬಂಗೇರ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಕುಲಾಲ ಯಾನೆ ಮೂಲ್ಯ ಸಮುದಾಯ ಗರಿಷ್ಠ ಪ್ರಮಾಣದಲ್ಲಿದ್ದು, ಮೂರನೇ ಅತಿ ಹೆಚ್ಚು ಮತದಾರರಿರುವ ಸಮುದಾಯವಾಗಿದೆ. ಜಿಲ್ಲೆಯ ನಿರ್ಣಾಯಯ ಸ್ಥಾನದಲ್ಲಿರುವ ಕುಲಾಲರ ಮತದಾರರ ಸಂಖ್ಯೆ ಅಂದಾಜು ೧.೮೪ ಲಕ್ಷವಾಗಿದೆ. ಆದರೆ ಚುನಾವಣೆಯ...

ಸರಪಾಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಬಂಟ್ವಾಳ: ಅಪಪ್ರಚಾರ ನಡೆಸುವವರಿಗೆ ಉತ್ತರ ನೀಡುವ ಅಗತ್ಯವಿಲ್ಲ. ನಮ್ಮ ಕೆಲಸವೇ ಅವರಿಗೆ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಮಣಿನಾಲ್ಕೂರು ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸರಪಾಡಿಯಲ್ಲಿ ನಡೆದ ಕಾಂಗ್ರೆಸ್...