ಬಂಟ್ವಾಳ: ಬೆಂಗಳೂರಿನ ಕೆ.ಜೆ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ವ್ಯಾಪ್ತಿಯಲ್ಲಿ ಯಾವುದೋ ಕ್ಷುಲಕ ವಿಷಯಕ್ಕೆ ಠಾಣೆಗೆ ನುಗ್ಗಿ, ದಾಂಧಲೆ ನಡೆಸಿ, ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ಹಾಳುಗೆಡವಿ, ಸ್ಥಳೀಯ ಶಾಸಕರ ಮನೆ ದ್ವಂಸ ನಡೆಸಿದ ಘಟನೆಯನ್ನು ಖಂಡಿಸಿ ಬಂಟ್ವಾಳ ತಾಲೂಕು ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಹಶೀಲ್ದಾರರಿಗೆ ಮನವಿ ನೀಡಿದ್ದಾರೆ.
ಇನ್ನು ಮುಂದೆ ಇಂತಹ ಕೃತ್ಯದಲ್ಲಿ ಯಾರೂ ಭಾಗಿಯಾಗದಂತೆ, ಘಟನೆಯಲ್ಲಿ ಭಾಗಿಯಾದ ಆರೋಪಿಗಳನ್ನು ಕೂಡಲೇ ಬಂಧಿಸಿ, ಘಟನೆಯಲ್ಲಿ ಉಂಟಾದ ನಷ್ಟವನ್ನು ಕೂಡಾ ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳಿಂದ ವಸೂಲಿ ಮಾಡಿ, ರಾಜ್ಯದಲ್ಲಿ ಸುವ್ಯವಸ್ಥೆ ಕಾಪಾಡಬೇಕೆಂದು ಬಂಟ್ವಾಳ ತಾಲೂಕು ಹಿಂದೂ ಜಾಗರಣ ವೇದಿಕೆ ಮನವಿ ಸಲ್ಲಿಸಿದೆ.