Sunday, October 22, 2023

ಚಾರ್ಮಾಡಿ : ಬಿರುಕು ಬಿಟ್ಟ ಅಲೇಖಾನ್ ಘಾಟ್ ರಸ್ತೆ: ವಾಹನ ಸಂಚಾರ ಸ್ಥಗಿತ

Must read

ಬೆಳ್ತಂಗಡಿ: ರಾಜ್ಯದೆಲ್ಲೆಡೆ ಮಳೆ ಆರ್ಭಟ ಜೋರಾಗಿದ್ದು, ಹಲವೆಡೆ ಪ್ರಕೃತಿ ವಿಕೋಪಗಳು ಸಂಭವಿಸುತ್ತಿದೆ. ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234 ರ ಮಧ್ಯ ಅಲೇಖಾನ್ ಸಮೀಪ ಘಾಟ್ ರಸ್ತೆ ಬಿರುಕು ಬಿಟ್ಟ ಕಾರಣ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಮತ್ತೆ ಸ್ಥಗಿತಗೊಂಡಿದೆ.

ಭಾರಿ ಮಳೆಯ ಕಾರಣದಿಂದ ಚಾರ್ಮಡಿ ಘಾಟಿಯ ಅಲ್ಲಲ್ಲಿ ಕೆಲವೆಡೆ ಗುಡ್ಡ ಕುಸಿತವಾಗುತ್ತಿದೆ. ಇಂದು ಬೆಳಗ್ಗೆ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಗುಡ್ಡ ಕುಸಿದಿದ್ದರಿಂದ ಸಂಚಾರ ಸ್ಥಿತವಾಗಿತ್ತು, ನಂತರ ತೆರವು ಕಾರ್ಯ ಪೂರ್ಣಗೊಳಿಸಿದ್ದು, ಇದೀಗ ಅಲೇಖಾನ್ ರಸ್ತೆ ಬಿರುಕಿನಿಂದ ಮತ್ತೆ ಸಂಚಾರಕ್ಕೆ ತೊಡಕುಂಟಾಗಿದೆ.

ರಸ್ತೆಯಲ್ಲಿ ದೊಡ್ಡ ಪ್ರಮಾಣದ ಬಿರುಕು ಕಂಡು ಬಂದ ಹಿನ್ನಲೆ ಮುನ್ನಚ್ಚೆರಿಕಾ ಕ್ರಮವಾಗಿ ಘಾಟ್ ನಲ್ಲಿ ರಸ್ತೆ ಸಂಚಾರ ಸ್ಥಗಿತ ಮಾಡಲಾಗಿದೆ. ಚಾರ್ಮಾಡಿ ಚೆಕ್ ಪೋಸ್ಟ್, ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಂದ್ ಮಾಡಲಾಗಿದೆ. ವಾಹನಗಳು ಸಾಲುಗಟ್ಟಿ ನಿಂತಿವೆ. ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದು, ಚಾರ್ಮಾಡಿ ಘಾಟ್ ಸಂಚಾರದ ಬಗ್ಗೆ ಇನ್ನಷ್ಟೇ ನಿರ್ಧಾರ ಮಾಡಬೇಕಿದೆ.

More articles

Latest article