Monday, April 8, 2024

74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಮಸ್ಜಿದುಳ್ ಖಿಳರ್ ಹಾಗೂ ದಾರುಲ್ ಉಲೂಂ ಮದರಸ ಪೇರಿಮಾರ್ ಮತ್ತು ಎಸ್.ವೈ.ಎಸ್. ಹಾಗೂ ಎಸ್.ಎಸ್.ಫ್. ಪೇರಿಮಾರ್ ಶಾಖೆ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವು ಮಸ್ಜಿದುಳ್ ಖಿಳರ್ ವಠಾರದಲ್ಲಿ ನಡೆಯಿತು.

ಜಮಾಅತ್ ಅಧ್ಯಕ್ಷ ಶಾಫಿಯಾಕ ಧ್ವಜಾರೋಹಣ ನೆರವೇರಿಸಿ ಸ್ಥಳೀಯ ಖತೀಬ್ ರಫೀಕ್ ಸ’ಅದಿ ಅಲ್ ಅಫ್ಳಲಿ ಹುತಾತ್ಮರ ಅನುಸ್ಮರಣೆ ಹಾಗೂ ಆಝಾದಿ ಸಂದೇಶವನ್ನು ಸಾರಿದರು.

ಈ ಸಂದರ್ಭದಲ್ಲಿ ಮಸ್ಜಿದುಳ್ ಖಿಳರ್ ಹಾಗೂ ದಾರುಲ್ ಉಲೂಂ ಮದರಸ ಮುಅಲ್ಲಿಮರಾದ ಮುಹಮ್ಮದ್ ನಿಝಾಮಿ, ಅಬೂಬಕರ್ ಸಿದ್ದೀಕ್ ಲತೀಫಿ, ನವಾಝ್ ಝೈನಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಫಳೂಲ್, ಕೋಶಾಧಿಕಾರಿ ಹುಸೈನ್ ಬಿ, ಶಾಖಾ ಪ್ರಧಾನ ಕಾರ್ಯದರ್ಶಿ ರಹೀಂ ಬಿ.ಆರ್ ಉಪಾಧ್ಯಕ್ಷ ಅಮೀನ್ ಮಾಲಿಕ್ ಕಾರ್ಯದರ್ಶಿ ಉನೈಸ್ ಬಾಲ್ದಬೊಟ್ಟು, ಕೆ.ಸಿ.ಎಫ್. ಕಾರ್ಯಕರ್ತ ನಿಯಾಝ್ ಅಹ್ಮದ್, ಎಸ್.ಬಿ.ಎಸ್. ವಿದ್ಯಾರ್ಥಿಗಳು, ಸ್ಥಳೀಯರು ಉಪಸ್ಥಿತರಿದ್ದರು.
ಶಾಖಾ ಕಾರ್ಯದರ್ಶಿ ಉನೈಸ್ ಬಿ ಸ್ವಾಗತಿಸಿ, ವಂದಿಸಿದರು.

ಎಸ್.ಎಸ್.ಫ್. ಪೇರಿಮಾರ್ ಶಾಖಾ ವತಿಯಿಂದ ಸಿಹಿತಿಂಡಿ ವಿತರಿಸಲಾಯಿತು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...