Sunday, April 7, 2024

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಧರ್ಮಸ್ಥಳ: ಪ್ರತೀಬಾರಿ ಸ್ವಾತಂತ್ರ್ಯ ದಿನಾಚರಣೆ ಬಂದಾಗಲೂ ಸಂಭ್ರಮದ ವಾತಾವರಣ ಶಾಲೆಯಲ್ಲಿರುತ್ತಿತ್ತು.ಆದರೆ ಈ ಬಾರಿ ಕೊರೊನಾ ಕಾರಣದಿಂದ ಮಕ್ಕಳಿಲ್ಲದೆ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತಾಯಿತು.

ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ‌ಪಣಕ್ಕಿಟ್ಟ ವೀರರನ್ನು ನೆನೆಪಿಸಬೇಕಾದ ದಿನ ಅದು ಇಂದಿಗೆ ಉಳಿಯಬಾರದು ಅವರ ತ್ಯಾಗ ಬಲಿದಾನಗಳ ಫಲವಾಗಿ ನಾವಿಂದು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ‌ ಎಂದು ಶ್ರೀ.ಧ.ಮಂ.ಆಂಗ್ಲಮಾಧ್ಯಮ.ಶಾಲೆ ಧರ್ಮಸ್ಥಳದಲ್ಲಿ ನಡೆದ ಸ್ವಾತಂತ್ರ್ಯ ದಿನಾ‍ಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ಗೈದ ಅಲ್ಲಿನ ಸಂಚಾಲಕ ಅನಂತ ಪದ್ಮನಾಭ ಭಟ್.ಅವರು ನುಡಿದರು.

ಅವರ ಜೊತೆಗೆ ಪುಟಾಣಿ ಅತಿಥಿ ಹೆಗ್ಗಡೆ ವಂಶದ ಕುಡಿ ಶೀ.ಸುರೇಂದ್ರ ಕುಮಾರ್ ಅವರ ಪುತ್ರ ಆರ್ಯಮನ್ ಆಗಮಿಸಿದ್ದು, ನಾವೆಲ್ಲರೂ ಇಂದಿನ ಪುಟಾಣಿಗಳು ಆದರೆ ನಾಳಿನ ಪ್ರಜೆಗಳು.ಭವ್ಯ ಭಾರತದ ಮುಂದಿನ ಕನಸಿನ ಕೂಸುಗಳು.

ಈ ದೇಶದ ಉಜ್ವಲ ಮುಂದೆ ನಮ್ಮ ಕೈಲಿದೆ.ಹೀಗಾಗಿ ನಾವಲ್ಲರೂ ಅದನ್ನು ನನಸುಮಾಡುವ ಪಣತೊಡುತ್ತೇವೆ ಎಂದು ಅದೇ ಕನಸು ಕಂಗಳ ನೋಟದೊಂದಿಗೆ ಸುಂದರವಾಗಿ ಪುಟಾಣಿಯಾದರೂ ಪ್ರಭುದ್ದತೆಯಿಂದ ನುಡಿದರು.ಜಿಟಿ ಜಿಟಿ ಸುರಿವ ಮಳೆಯನ್ನೂ ಲೆಕ್ಕಿಸದೆ ಸರಿಯಾಗಿ 8.30 ಗಂಟೆಗೆ ಶಾಲಾ ಸಂಚಾಲಕರಾದ ಶೀಯುತ ಅನಂತಪದ್ಮನಾಭ ಭಟ್ ಹಾಗೂ ಪುಟಾಣಿ ಆರ್ಯಮನ್ ಜೊತೆಗೂಡಿ ಧ್ವಜಾರೋಹಣ ಗೈದರು.
ಶಾಲಾ ಶಿಕ್ಷಕವೃಂದ ರಾಷ್ಟ್ರಗೀತೆ,ಧ್ವಜಗೀತೆ,ವಂದೇಮಾತರಂ ಗೀತೆಯನ್ನು ಹಾಡಿ ದೇಶಕ್ಕೆ ನಮನ ಸಲ್ಲಿಸಿದರು.

ಕಾರ್ಯಕ್ರಮ ಮುಖ್ಯ ಶಿಕ್ಷಕಿ ಪರಿಮಳಾ ಎಂ.ವಿ. ಅವರ ನೇತೃತ್ವದಲ್ಲಿ ನಡೆಯಿತು. ನಿಡ್ಲೆ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬ್ಬಂದಿಗಳು ಹಾಜರಿದ್ದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...