ಬಂಟ್ವಾಳ: ಬಂಟ್ವಾಳ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮತಿ ವತಿಯಿಂದ ಶ್ರೀ ಗಣೇಶೋತ್ಸವ ಆಚರಣೆ ಬಗ್ಗೆ ಸಭೆ ಆ.17 ರಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತು.
ಮಾಜಿ ಸಚಿವ, ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಅವರು ಮಾತನಾಡಿ, ಕೊರೊನಾ ಕಾರಣದಿಂದ ಈ ಬಾರಿ ಸರಕಾರದ ಮಾರ್ಗಸೂಚನೆ ಪ್ರಕಾರ ಸರಳವಾಗಿ ಆಚರಿಸಬೇಕಾಗಿದೆ ಎಂದರು.
ಈ ಬಾರಿ ಜಕ್ರಿಬೆಟ್ಟು ಮೈದಾನದಲ್ಲಿ ಶ್ರೀ ಗಣೇಶೋತ್ಸವ ನಡೆಸಲಾಗದ ಕಾರಣ ದೇವಸ್ಥಾನ ಅಥವಾ ಸಭಾಂಗಣದಲ್ಲಿ ಸಂಪ್ರದಾಯ ಪ್ರಕಾರ ಒಂದು ದಿನ ಮಾತ್ರ ನಡೆಸಲಾಗುವುದು ಎಂದರು.
ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಪದಾಧಿಕಾರಿಗಳಾದ ಪಿ.ಜಿನರಾಜ ಆರಿಗ, ಚಂದ್ರಪ್ರಕಾಶ್ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಜನಾರ್ದನ ಚಂಡ್ತಿಮಾರ್, ಪದ್ಮನಾಭ ರೈ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರವೀಣ್ ಕಿಣಿ, ಪ್ರಶಾಂತ್ ಕುಲಾಲ್, ಸದಾಶಿವ ಬಂಗೇರ, ಮಹಾಬಲ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.
ಪ್ರ.ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿ, ವಂದಿಸಿದರು.