ಬಂಟ್ವಾಳ: ನೆರೆಯಿಂದ ಜಲಾವೃತಗೊಂಡ ಪ್ರದೇಶಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ತಗ್ಗುಪ್ರದೇಶದ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಾಕೃತಿಕ ವಿಕೋಪದ ಸಂದರ್ಭದಲ್ಲಿ ತುರ್ತಾಗಿ ಅಧಿಕಾರಿಗಳು ಜನರ ಸಮಸ್ಯೆ ಗಳಿಗೆ ಸ್ಪಂದನೆ ನೀಡುವಂತೆ ಅವರು ತಿಳಿಸಿದ್ದಾರೆ.
ಅಜ್ಜಿಬೆಟ್ಟು ಗ್ರಾಮದ ದಂಬೆದಾರ್ ಜಯ ಶೆಟ್ಟಿ ಇವರ ತೋಟದ ಬಳಿ ಹೊಳೆ ಬದಿ ತಡೆಗೋಡೆ ಕುಸಿದು ನೀರು ತೋಟಕ್ಕೆ ನುಗ್ಗಿ ಹಾನಿ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ತುಂಗಪ್ಪ ಬಂಗೇರಾ, ತಹಶಿಲ್ದಾರರಾದ ರಶ್ಮಿ ಎಸ್.ಆರ್., ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರ.ಕಾರ್ಯದರ್ಶಿ ಡೊಂಬಯ ಅರಳ, ಪ್ರಮುಖರಾದ ಗಣೇಶ್ ರೈ, ಪುರುಷೋತ್ತಮ ಶೆಟ್ಟಿ ವಾಮದಪದವು, ದಿನೇಶ್ ದಂಬೆದಾರ್, ವಿಜಯ ರೈ, ಗೋಪಾಲಕೃಷ್ಣ ಚೌಟ, ಶ್ಯಾಮ್ ಪ್ರಸಾದ್ ಪೂಂಜಾ, ರವಿರಾಮ ಕಂಚಾರು, ಜಗದೀಶ್ ಉಳಗುಡ್ಡೆ, ವಿಶ್ವನಾಥ, ವಿ.ಎ. ಸ್ವಾತಿ, ಕಂದಾಯ ನಿರೀಕ್ಷಕ ನವೀನ್, ನಾಗೇಶ್ ಶೆಟ್ಟಿ, ದೇವಿಪ್ರಸಾದ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.