Wednesday, October 18, 2023

ರಾಮ ಮಂದಿರ ಶಿಲಾನ್ಯಾಸದ ಸವಿನೆನಪಿಗೆ ಒಡಿಯೂರು ಶ್ರೀಗಳವರಿಂದ ಕದಂಬವನಕ್ಕೆ ಚಾಲನೆ

Must read

 

ವಿಟ್ಲ: ಕೋಟಿ ಭಾರತೀಯರ ಕನಸಾದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ಸಂಪನ್ನಗೊಳ್ಳುತ್ತಿರುವ ಐತಿಹಾಸಿಕ ಸುಮುಹೂರ್ತದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರು ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲಿ, ಈ ಐತಿಹಾಸಿಕ ದಿನದ ಸವಿನೆನಪಿಗಾಗಿ ಒಡಿಯೂರು ಶ್ರೀ ಸಂಸ್ಥಾನದ ಪರಿಸರದಲ್ಲಿ ’ಕದಂಬವನ’ವನ್ನು ನಿರ್ಮಿಸಲು ಚಾಲನೆ ನೀಡಿ, ಪ್ರಕೃತಿ ಸಂರಕ್ಷಣೆಯ ಸಂಕಲ್ಪ ಮಾಡಿ ಅನುಗ್ರಹ ಸಂದೇಶವಿತ್ತರು.
ಸಾಧ್ವಿ ಶ್ರೀ ಮಾತಾನಂದಮಯೀ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ.ಶೆಟ್ಟಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ ರಘುನಾಥ ಶೆಟ್ಟಿ ಪಟ್ಲಗುತ್ತು, ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದ ನಿರ್ವಹಣಾ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ಎ. ಜಯಪ್ರಕಾಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ರೇಣುಕಾ ಎಸ್.ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕರುಗಳಾದ ಪಿ. ಲಿಂಗಪ್ಪ ಗೌಡ, ತಾರಾನಾಥ ಶೆಟ್ಟಿ ಒಡಿಯೂರು, ಹಿರಿಯ ಪತ್ರಕರ್ತ ಯಶವಂತ ವಿಟ್ಲ, ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶಿಕ್ಷಕ-ಶಿಕ್ಷಕಿಯರು ಹಾಗೂ ಶ್ರೀ ಸಂಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

More articles

Latest article