Sunday, April 7, 2024

ಸೆ.7 (ಸೋಮವಾರ): ಸೋರ್ನಾಡು- ಪುಚ್ಚಮೊಗರು ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಬಂಟ್ವಾಳ: 16ಕೋಟಿ 50 ಲಕ್ಷ ವೆಚ್ಚದಲ್ಲಿ ಬಂಟ್ವಾಳ—ಮೂಡಬಿದ್ರಿ ಲೋಕೋಪಯೋಗಿ ರಸ್ತೆಯ ಸೊರ್ನಾಡ್ ನಿಂದ ಪುಚ್ಚಮೊಗರು ತನಕ ರಸ್ತೆ ಅಗಲೀಕರಣ ಸೇರಿದಂತೆ ಮರು ಡಾಮರೀಕರಣ ಕಾಮಗಾರಿಗೆ ನಾಳೆ.ಸೆ.7 ರಂದು ಸೋಮವಾರ ಬೆಳಿಗ್ಗೆ ಸಿದ್ದಕಟ್ಟೆ ಯಲ್ಲಿ ಗುದ್ದಲಿ ಪೂಜೆ ನಡೆಯಲಿದೆ.

ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ—ಮೂಡಬಿದ್ರಿ ಲೋಕೋಪಯೋಗಿ ರಸ್ತೆಯ ಸೊರ್ನಾಡ್ ನಿಂದ ಪುಚ್ಚಮೊಗರು ತನಕ ರಸ್ತೆ ಅಗಲೀಕರಣ ಸೇರಿದಂತೆ ಮರು ಡಾಮರೀಕರಣ ಕಾಮಗಾರಿಗೆ ರಾಜ್ಯ ಸರ್ಕಾರದ “ರಾಜ್ಯ ರಸ್ತೆ ನಿಧಿಯ”ಮೂಲಕ ಸುಮಾರು 13 ಕೋಟಿ ರೂ ಅನುದಾನವನ್ನು ಹಾಗೂ ಸಿದ್ದಕಟ್ಟೆಯಿಂದ ಮಂಚಕಲ್ಲಿನತನಕ ಅಗಲೀಕರಣಕ್ಕೆ ಹಾಗೂ ಮರು ಡಾಮರಿಕರಣಕ್ಕೆ ಸುಮಾರು 50ಲಕ್ಷ ರೂ,ಬಂಡಸಾಲೆಯಿಂದ-ಎಣಿಲಕೋಡಿ-ಪಂಜಿಕಲ್ಲುಪದವು-ಆಚಾರಿಪಲ್ಕೆ ರಸ್ತೆಗೆ 3 ಕೋಟಿ ರೂಪಾಯಿ ಶಾಸಕರು ಅನುದಾನದಲ್ಲಿ ಬಿಡುಗಡೆ ಯಾಗಿದೆ.ಈ ಎಲ್ಲಾ ಕಾಮಗಾರಿಗೆ ಸೆ
07 ರಂದು ಸೋಮವಾರ (ನಾಳೆ) ಬೆಳೆಗ್ಗೆ 10 ಗಂಟೆಗೆ ಸಿದ್ದಕಟ್ಟೆ ಜಂಕ್ಸನ್ ನಲ್ಲಿ ಗುದ್ದಲಿ ಪೂಜೆ ನಡೆಯಲಿದೆ.
ಬಳಿಕ 11 ಗಂಟೆಗೆ ಬಂಡಸಾಲೆಯಿಂದ-ಎಣಿಲಕೋಡಿ ರಸ್ತೆಗೆ ಗುದ್ದಲಿ ಪೂಜೆಯ ನಡೆಯಲಿದೆ.
ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಯವರು ಸೇರಿದಂತೆ ಅನೇಕ ಪ್ರಮುಖರು, ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...