ಬಂಟ್ವಾಳ: ಉಳಿ ಗ್ರಾಮದ ಕಕ್ಯಬೀಡು ಶ್ರೀ ಪಂಚದುರ್ಗಾಪರಮೇಶ್ವರೀ ದೇವಿ ಕ್ಷೇತ್ರದಲ್ಲಿ ಅ.17ರಿಂದ ಅ.25ರವರೆಗೆ ನವರಾತ್ರಿ ಪೂಜೋತ್ಸವ ಜರಗಲಿರುವುದು.
ಪ್ರತಿದಿನ ರಾತ್ರಿ ಮಹಾಪೂಜೆ, ತೀರ್ಥ ಪ್ರಸಾದ, ಅನ್ನಸಂತರ್ಪಣೆ, ಭಜನ ಕಾರ್ಯಕ್ರಮ, ಸಾರ್ವಜನಿಕ ಆಯುಧ ಪೂಜೆ ನಡೆಯಲಿರುವುದು, ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಡ್ಡಾಯವಾಗಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಉಳಿ ದಾಮೋದರ ನಾಯಕ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.