ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವತಿಯಿಂದ ಗಾಂಧೀಜಿಯವರ 151ನೇ ಜನ್ಮ ದಿನದ ಪ್ರಯುಕ್ತ ಸ್ವಚ್ಛ ಭಾರತ್ ಯೋಜನೆಯ ಅಂಗವಾಗಿ ವಿಟ್ಲದ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಟ್ಲ ಸುತ್ತಮುತ್ತಲಿನಲ್ಲಿ ಸ್ವಚ್ಛತೆ ಮಾಡಲಾಯಿತು.
ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಕಲ್ಲಕಟ್ಟ, ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ, ಅರುಣ್ ಎಂ ವಿಟ್ಲ, ರಾಮ್ದಾಸ್ ಶೆಣೈ, ಚಂದ್ರಕಾಂತಿ ಶೆಟ್ಟಿ, ಲೋಕನಾಥ ಶೆಟ್ಟಿ ಕೊಲ್ಯ, ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಎಂಜಿನಿಯರ್ ಶ್ರೀಧರ್, ಸಿಬ್ಬಂದಿಗಳಾದ ಚಂದ್ರಶೇಖರ ವರ್ಮ ಮೊದಲಾದವರು ಉಪಸ್ಥಿತರಿದ್ದರು.