Wednesday, October 18, 2023

ಮೂರು ವಾರಗಳ ಕಾಲ ಮಧ್ಯಂತರ ರಜೆ ಘೋಷಿಸಿದ ರಾಜ್ಯ ಸರ್ಕಾರ

Must read

ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆ ರಾಜ್ಯದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಅ.12 ರಿಂದ ಅ.30 ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಬಿಎಸ್‌ವೈ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.
ತಾತ್ಕಾಲಿಕವಾಗಿ ‘ವಿದ್ಯಾಗಮ’ ಯೋಜನೆಯನ್ನು ಸ್ಥಗಿತಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್
ಹಲವಾರು ಶಿಕ್ಷಕರು ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

More articles

Latest article