Tuesday, October 17, 2023

ಪುತ್ತೂರು: ಕೆ.ಎಸ್.ಆರ್‍.ಟಿ.ಸಿ. ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Must read

ಪುತ್ತೂರು: ಇಲ್ಲಿನ ಕೆ.ಎಸ್.ಆರ್‍.ಟಿ.ಸಿ. ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಈ ಅಪರಿಚಿತ ವ್ಯಕ್ತಿ ಮಂಡ್ಯ ಮೂಲದವರು ಎಂದು ಶಂಕಿಸಲಾಗಿದೆ. ಈತ ಕಳೆದ ಕೆಲವು ದಿನಗಳಿಂದ ಪುತ್ತೂರು ಪರಿಸರದಲ್ಲೇ ತಿರುಗಾಡುತ್ತಿದ್ದ. ನಿನ್ನೆ ರಾತ್ರಿ ಬಸ್ ನಿಲ್ದಾಣದ ಒಳಗೆ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಇರುವ ಆಸನದಲ್ಲಿ ಮಲಗಿದ್ದವರು ಇಂದು ಮುಂಜಾನೆ ಮೃತಪಟ್ಟಿರುವುದು ತಿಳಿದು ಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಈತನ ವಿಳಾಸ ಪತ್ತೆ ಹಚ್ಚಿದ ಪೊಲೀಸರು ಮನೆಯವರಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ಧಾರೆ.

More articles

Latest article