ಬೆಳ್ತಂಗಡಿ: ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಕೊಯ್ಯೂರು ಹಾಗೂ 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸರಕಾರಿ ಪ್ರೌಢ ಶಾಲೆಗಳಲ್ಲಿ ರಾಜ್ಯಮಟ್ಟದಲ್ಲಿ 620/625 ಅಂಕ ಗಳಿಸಿ 4 ನೇ ಸ್ಥಾನ ಪಡೆದ ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಇಲ್ಲಿಯ ವಿದ್ಯಾರ್ಥಿನಿ ಶೈವಿ ಬಿ. ಮತ್ತು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಕ್ತಿ ಮೀರಿ ಶ್ರಮಿಸಿದ ಶಿಕ್ಷಕರಿಗೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಯ್ಯೂರು ಇಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ಮುಖ್ಯೋಪಾಧ್ಯಾಯರಾಗಿ ನಿವೃತ್ತಿ ಹೊಂದಿದ ಶಿಕ್ಷಕಿ ಜಾಹ್ನವಿ ಇವರಿಗೆ ಅಭಿನಂದನಾ ಕಾರ್ಯಕ್ರಮ ಕೊಯ್ಯೂರು ಪಂಚಾ ದುರ್ಗಾ ಸಭಾಭವನ ಆದೂರ್ ಪೆರಾಲ್ ನಲ್ಲಿ ಜರುಗಿತು.