Tuesday, October 17, 2023

ಪಿ.ಎಸ್.ಐ. ನಿಧಿ ಬಿ.ಎನ್. ಗೆ ಪೊಲೀಸ್ ಇಲಾಖೆಯಿಂದ ಸನ್ಮಾನ

Must read

ಬಂಟ್ವಾಳ: ಪಿ.ಎಸ್.ಐ. ಹುದ್ದೆಗೆ ನೇರ ನೇಮಕಾತಿಗೊಂಡ ನಿಧಿ ಬಿ.ಎನ್. ಗೆ ಪೋಲೀಸ್ ಇಲಾಖೆಯಿಂದ ಸನ್ಮಾನ.

ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಪಂಜಿಕಲ್ಲು ಗ್ರಾಮದ ಬಂಡಸಾಲೆ ನಿವಾಸಿ ನಾರಾಯಣ ಭಂಡಾರಿ ರವರ ಮಗಳು ನಿಧಿ ಬಿ.ಎನ್‌. ರವರು ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಪಿ.ಎಸ್.ಐ. ನೇರ ನೇಮಕಾತಿ ಹುದ್ದೆಗೆ ಆಯ್ಕೆಯಾಗಿದ್ದು, ಇವರನ್ನು ನ.7 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಇಲಾಖಾ ವತಿಯಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ವೆಲೆಂಟೈನ್‌ ಡಿʻಸೋಜಾ, ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ ನಾಗರಾಜ್‌, ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ. ಎಂ.ಎಸ್‌. ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

More articles

Latest article