ಬಂಟ್ವಾಳ: ಬಿಜೆಪಿ ಯುವ ಮೋರ್ಚಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶುಕ್ರವಾರ ಮುಂಜಾನೆ ಅಟಲ್ ಬಿಹಾರಿ ವಾಜಪೇಯಿ ಯವರ ಜನ್ಮದಿನದ ಪ್ರಯುಕ್ತ ಶ್ರೀರಾಮ ಗೋಶಾಲೆ ಸುದೇಕ್ಕರು ಕಲ್ಲಡ್ಕ ಇಲ್ಲಿ ಯುವ ಮೋರ್ಚಾ ಬಂಟ್ವಾಳದ ವತಿಯಿಂದ ಗೋಶಾಲೆ ಮತ್ತು ಗೋವುಗಳನ್ನು ಶುಚಿಗೊಳಿಸುವ ಹಾಗೂ ಹಟ್ಟಿ ಸ್ವಚ್ಛತೆಯ ಜೊತೆಗೆ ಗೋ ಪೂಜಾ ಕಾರ್ಯಕ್ರಮವು ನೆರವೇರಿತು.
ಸೇವಾ ಕಾರ್ಯಕ್ರಮದಲ್ಲಿ ಬಂಟ್ವಾಳ ಯುವಮೋರ್ಚಾ ಅಧ್ಯಕ್ಷರಾದ ಪ್ರದೀಪ್ ಅಜ್ಜಿಬೆಟ್ಟು ,ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ ,ಬಂಟ್ವಾಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ದಂಬೆದಾರು, ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ಕಿಶೋರ್ ಪಲ್ಲಿಪ್ಪಾಡಿ , ಉಪಾಧ್ಯಕ್ಷರಾದ ಕಾರ್ತಿಕ್ ಬಲ್ಲಾಳ್ ,ಯತಿನ್ ಶೆಟ್ಟಿ , ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.