Wednesday, April 17, 2024

ಮುಂಜಾನೆವರೆಗೂ ಎಣಿಕೆ ಕಾರ್ಯ

ಬಂಟ್ವಾಳ: ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಮುಂಜಾನೆ 5 ಗಂಟೆಯ ವೇಳೆ ಮುಕ್ತಾಯಗೊಂಡಿತು.

ಅತೀ ಹೆಚ್ಚು ಗ್ರಾಮ ಪಂಚಾಯತ್ ಗಳನ್ನೊಳಗೊಂಡ ಬಂಟ್ವಾಳ ತಾಲೂಕಿನ ಮತ ಎಣಿಕೆ ಕಾರ್ಯ ಬೆಳಗ್ಗೆ ಸರಿಯಾದ ಸಮಯಕ್ಕೆ ಆರಂಭವಾಗಿದ್ದರೂ ಕೂಡ ಬಹಳ ನಿಧಾನಗತಿಯ ಎಣಿಕೆ ಪ್ರಕ್ರಿಯೆ ನಡೆದಿದೆ.

ಬಹುತೇಕ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಬೇಗನೆ ಎಣಿಕೆ ಕಾರ್ಯಗಳು ಮುಗಿದಿದ್ದರೂ ಕೂಡ ಬಂಟ್ವಾಳ ತಾಲೂಕಿನ ಚುನಾವಣೆ ಎಣಿಕೆ ಕಾರ್ಯ ಮಾತ್ರ ಮುಂಜಾನೆವರೆಗೂ ಮುಂದುವರಿದಿತ್ತು.

ಅಭ್ಯರ್ಥಿಗಳ ಜೊತೆಗೆ ಏಜಂಟರುಗಳು , ಪೋಲೀಸರು ಮತ್ತು ಚುನಾವಣಾ ಕರ್ತವ್ಯ ದ ಅಧಿಕಾರಿಗಳು ರಾತ್ರಿ ನಿದ್ದೆ ಬಿಟ್ಟು ಮುಂಜಾನೆವರೆಗೂ ಕೆಲಸ ಕಾರ್ಯದಲ್ಲಿ ತೊಡಗಿದರು.

ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದ ಎಣಿಕೆ ಕಾರ್ಯ ಮುಂಜಾನೆ 5 ಗಂಟೆವರೆಗೂ ಸಾಗಿತು.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...