ಮಂಗಳೂರು: ನಗರದಲ್ಲಿ ಉಗ್ರರ ಪರ ಗೋಡೆ ಬರಹಗಳನ್ನು ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸಾದತ್ (50) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ನಿನ್ನೆ ಡಿ.11ರಂದು ಸಾದತ್ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಕೊರೊನಾ ಪರೀಕ್ಷೆ ಪೂರ್ಣಗೊಳಿಸದ ಹಿನ್ನೆಲೆ ಆತನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.
ಸಾದತ್ ಜವಳಿ ವ್ಯಾಪಾರಿಯಾಗಿದ್ದ. ಶಾಕೀರ್ಗೆ ಆಶ್ರಯ ಹಾಗೂ ಆರ್ಥಿಕ ನೆರವು ನೀಡಿದ್ದು, ಈ ರೀತಿಯ ಕೃತ್ಯಗಳನ್ನು ಮಾಡಲು ಸಾದಿಕ್ ಶಾಕೀರ್ಗೆ ಪ್ರೇರಣೆ ನೀಡಿದ್ದ ಎಂಬ ಮಾಹಿತಿ ಇದೆ. ಈ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.