ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.



ಕಾರ್ಯಕ್ರಮವನ್ನುದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನು ಕಾಲೇಜಿನ ಪ್ರಾಧ್ಯಾಪಕರಾದ ಆಂಜನೇಯ ಎಮ್. ಎನ್. ಹಾಗೂ ಅಧ್ಯಕ್ಷೀಯ ಮಾತುಗಳನ್ನು ಪ್ರಾಂಶುಪಾಲರಾದ ಗಣಪತಿ ಭಟ್ ಕುಳಮರ್ವ ಇವರು ಮಾಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳು, ರೋವರ್ಸ್ ಲೀಡರ್ಸ್, ಭಾರತೀಯ ಯುವ ರೆಡ್ ಕ್ರಾಸ್ ಸಹಯೋಗದಲ್ಲಿ ಕಾರ್ಯಕ್ರಮವು ನಡೆಯಿತು.