ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರಲಿರುವ ಸಚಿವರ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕೃತ ವಾಗಿ ಘೋಷಿಸಿದರು.



ಆ ಏಳು ಸಚಿವರ ಹೆಸರಿರುವ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ , ಅದರಲ್ಲಿ ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೇಶ್ವರ್ ಹಾಗೂ ಅರವಿಂದ ಲಿಂಬಾವಳಿಗೆ ಸ್ಥಾನ ನೀಡಲಾಗಿದೆ ಎಂದು ಸಿಎಂ ಬಿಎಸ್ವೈ ಹೇಳಿದರು.