ಬಂಟ್ವಾಳ: ಬಂಟ್ವಾಳ ತಾಲೂಕಿನಾದ್ಯಾಂತ ಕೆಂಪು ಕಲ್ಲು ಕೊರೆ ಸ್ಥಗಿತಗೊಂಡು ಸಾರ್ವಜನಿಕರು ಮನೆ ಕಟ್ಟಲು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಕೆಂಪು ಕೋರೆ ಲೈಸನ್ಸ್ ದರಾರ ಜೊತೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸಕ್ರಮವಾಗಿ ಕೆಂಪು ಕಲ್ಲು ಕೋರೆಗೆ ತಕ್ಷಣ ಪರವಾನಿಗೆ ನೀಡುವಂತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಆಗ್ರಹಿಸಿದರು.



ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪದ್ಮನಾಭ ಕೋಟ್ಯಾನ್ ಉಪಸ್ಥಿತರಿದ್ದರು.