Thursday, April 25, 2024

ದಯಾನಂದ ಕತ್ತಲ್ ಸಾರ್ ಅವರ ಕಾರಿಗೆ ಮೀನಿನ ಲಾರಿ ಡಿಕ್ಕಿ

ಬಂಟ್ವಾಳ: ಲಾರಿ ಮತ್ತು ಕಾರಿನ ನಡುವೆ ಮಂಗಳೂರಿನಲ್ಲಿ ಮುಂಜಾನೆ ವೇಳೆ ನಡೆದ ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ (ಇಂದು)ಬೆಳಿಗ್ಗೆ 5.15 ರ ಸುಮಾರಿಗೆ ನಂತೂರು ಜಂಕ್ಷನ್ ಬಳಿ ಮೀನಿನ ಲಾರಿ ದಯಾನಂದ ಕತ್ತಲ್ ಸಾರ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ನಡೆದಿದೆ. ದಯಾನಂದ ಕತ್ತಲ್ ಸಾರ್ ಅವರು ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ಘಟನೆಯಲ್ಲಿ ದಯಾನಂದ ಕತ್ತಲ್ ಸಾರ್ ಅವರಿಗೆ ತಲೆಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.   ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

More from the blog

ಅಡಿಕೆ ದರ ಏರಿಕೆ : ಚುನಾವಣೆ ಬಳಿಕ ಮತ್ತಷ್ಟು ಏರಿಕೆ..?

ಪುತ್ತೂರು:ಲೋಕಸಭಾ ಚುನಾವಣೆ ಮುಗಿದ ಬಳಿಕ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆ ಕಾಣುವ ಸಾಧ್ಯತೆಯನ್ನು ಮಾರುಕಟ್ಟೆ ಮೂಲಗಳು ವ್ಯಕ್ತಪಡಿಸಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಚುನಾವಣೆ ದಿನಾಂಕ ಘೋಷಣೆಯ ಮೊದಲು ಅಂದರೆ ಫೆಬ್ರವರಿಯಲ್ಲಿ...

ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಪೆರ್ಡೂರು ಮೇಳದಲ್ಲಿ 28 ವರ್ಷಗಳಲ್ಲಿ ಕಾಲ ಪ್ರಧಾನ...

ಬಸ್ ನಲ್ಲಿ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಡಾ| ಪ್ರಭಾಕರ್ ಭಟ್ ಭೇಟಿ

ಬಂಟ್ವಾಳ:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ...

ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ, ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ- ಮಾಜಿ ಸಚಿವ ಬಿ.ರಮಾನಾಥ ರೈ

ಕಾಂಗ್ರೆಸ್ ಗ್ಯಾರಂಟಿ ಸರಿಯಾ? ಮೋದಿ ಗ್ಯಾರಂಟಿಯಾ? ಇದು ಚರ್ಚೆಯಾಗಬೇಕಿದೆ, ಕೇಂದ್ರದ ಬಿಜೆಪಿ ಸರಕಾರ ವಚನ ಭ್ರಷ್ಟ ಸರಕಾರವಾಗಿದೆ, ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ,ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ...