Friday, October 27, 2023

ರಸ್ತೆ ಸುರಕ್ಷತಾ ನಿಯಮ ಪಾಲಿಸಿ – ಡಾ|| ಚೂಂತಾರು

Must read

ಪ್ರತೀ ವರ್ಷ ನಮ್ಮ ದೇಶದಲ್ಲಿ ಸುಮಾರು 1.5 ಲಕ್ಷ ಮಂದಿ ರಸ್ತೆ ಅಪಘಾತಗಳಿಂದ ಜೀವ ಕಳೆದುಕೊಳ್ಳುತ್ತಾರೆ. ಪ್ರತೀ ಮೂರು ನಿಮಿಷಕ್ಕೆ ಒಬ್ಬರು ರಸ್ತೆ ಅಪಘಾತದಿಂದ ಸಾಯುತ್ತಿದ್ದಾರೆ. ರಸ್ತೆ ಸುರಕ್ಷತಾ ನಿಯಮಗಳನ್ನು ಬಿಗಿಗೊಳಿಸಿ ಜನರು ಸರಿಯಾಗಿ ಪಾಲಿಸಿದಲ್ಲಿ ಈ ಸಾವು ನೋವಿನ ಪ್ರಮಾಣ ತಗ್ಗಿಸಬಹುದು. 2020 ರಲ್ಲಿ ರಸ್ತೆ ನಿಯಮದ ಪರಿಷ್ಕರಣೆಯಿಂದ ಜನರ ಸಾವು ನೋವಿನ ಸಂಖ್ಯೆ ಕಡಿಮೆಯಾಗಿರುವುದು ಸಂತಸಕರ ವಿಚಾರ. ಈ ನಿಟ್ಟಿನಲ್ಲಿ ನಾವು ಇನ್ನೂ ಹೆಚ್ಚು ಜಾಗೃತರಾಗಿ ಜೀವ ಹಾನಿ ತಪ್ಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ನುಡಿದರು.

ನವಯುವ ಟೋಲ್, ತಲಪಾಡಿ ಇವರ ಆಶ್ರಯದಲ್ಲಿ ನಡೆದ ರಸ್ತೆ ಸುರಕ್ಷತಾ ಆಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಉಳ್ಳಾಲ ಠಾಣಾ ಸಬ್‌ಇನ್ಸ್‌ಪೆಕ್ಟರ್  ರೇವಣಸಿದ್ದ ಅವರು ರಸ್ತೆ ಸುರಕ್ಷಾ ಅಭಿಯಾನವನ್ನು ಉದ್ಘಾಟಿಸಿ, ಜನರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದು ನುಡಿದರು. ರಾಷ್ರೀಯ ಹೆದ್ದಾರಿ ಪ್ರಾಧಿಕಾರ ಇದರ ಹಿರಿಯ ಅಧಿಕಾರಿ  ಶಿಶುಮೋಹನ್ ಮಾತನಾಡಿ ರಸ್ತೆ ಸುರಕ್ಷತಾ ನಿಯಮಗಳು ಜನರಿಗಾಗಿ ಸರಕಾರ ಮಾಡಿದ ವ್ಯವಸ್ಥೆಯಾಗಿದ್ದು, ಎಲ್ಲರೂ ಪಾಲಿಸಿದರೆ ಸುಂದರ ಸಮಾಜ ನಿರ್ಮಾಣವಾಗಬಹುದು ಎಂದರು. ಪ್ರಸಾದ ನೇತ್ರಾಲಯದ  ಸಿದ್ದಾರ್ಥ್ ಶೆಟ್ಟಿ ಉಪಸ್ಥಿತರಿದ್ದರು. ನವಯುಗ ಸಂಸ್ಥೆಯ ಪ್ರಬಂಧಕರಾದ ಮತ್ತು ಶಿವಪ್ರಸಾದ್ ಪುತ್ತಿಗೆ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಚಾಲಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.

More articles

Latest article