Sunday, October 22, 2023

ಕೆಎಸ್ಸಾರ್ಟಿಸಿ ಬಸ್- ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರ ಗಂಭೀರ

Must read

ಮಂಗಳೂರು ಹೊರವಲಯದ ತಲಪಾಡಿ ಬಳಿ ಬಸ್​ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿರುವ  ಘಟನೆ ನಡೆದಿದೆ.

ಉದ್ಯಾವರ ಮಾಡ ನಿವಾಸಿ ತುಳಸಿ (35) ಗಾಯಗೊಂಡಿರುವ ವ್ಯಕ್ತಿ. ತಲಪಾಡಿಯಲ್ಲಿ ಟಯರ್ ಅಂಗಡಿ ಇಟ್ಟುಕೊಂಡಿದ್ದ ತುಳಸಿ ಅವರು ಮನೆಯಿಂದ ಸ್ಕೂಟರಿನಲ್ಲಿ ಬರುತ್ತಿದ್ದ ಸಂದರ್ಭ, ಡಿವೈಡರ್ ಇರುವ ಪ್ರದೇಶದಲ್ಲಿ ತಿರುಗಿಸುತ್ತಿದ್ದಾಗ ಮಂಗಳೂರಿನಿಂದ ಕಾಸರಗೋಡು ಮಾರ್ಗವಾಗಿ ಬರುತ್ತಿದ್ದ ಕರ್ನಾಟಕ ಸಾರಿಗೆ ಬಸ್​ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಕೂಟರ್ ಬಸ್ಸಿನಡಿ ಸಿಲುಕಿದ್ದಾರೆ.

ಬಸ್-ಸ್ಕೂಟರ್ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

More articles

Latest article