Friday, April 19, 2024

ರೈತ ವಿರೋಧಿ ಮಸೂಗಳನ್ನು ವಿರೋಧಿಸಿ ಬಿ.ಸಿ.ರೋಡಿನಲ್ಲಿ ರೈತರ ಪ್ರತಿಭಟನೆ, ಹೆದ್ದಾರಿ ಬಂದ್

 

ಬಂಟ್ವಾಳ: ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ರೈತ ಸಂಘಟನೆಗಳ ಒಕ್ಕೂಟದಿಂದ ಬಿ.ಸಿ.ರೋಡಿನ ಮೇಲ್ಸೇತುವೆಯಡಿಯಲ್ಲಿ ಶುಕ್ರವಾರ ಪ್ರತಿಭಟನಾ ಸಭೆ ನಡೆಯಿತು‌.

ಕೇಂದ್ರ ಮತ್ತು ರಾಜ್ಯ ಸರಕಾರಗಳು ರೈತ ವಿರೋಧಿ ನೀತಿಗಳನ್ನು ಅಳವಡಿಸುತ್ತಿದ್ದು ಕೃಷಿ ಕ್ಷೇತ್ರವನ್ನು ಬಂಡವಾಳ ಶಾಹಿಗಳ ಹಿಡಿತಕ್ಕೆ ನೀಡುವ ಒಪ್ಪಿಸುವ ಪ್ರಯತ್ನ ಮಾಡುತ್ತಿದೆ. ಅನ್ನದಾತರ ರಕ್ಷಣೆ ಮಾಡಬೇಕಾದ ಸರಕಾರಗಳು ಬಂಡವಾಳ ಶಾಹಿಗಳ ಹಿತ ಕಾಪಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಾಲ್ಕು ತಿಂಗಳಿಂದ ದೆಹಲಿಯ ಹೊರ ವಲಯದಲ್ಲಿ ರೈತರು ಧರಣಿ ಕುಳಿತಿದ್ದಾರೆ. ಸಿನಿಮಾ ನಟಿ ಗರ್ಭಿಣಿ ಆದರೆ ಕರೆ ಮಾಡಿ ಆರೋಗ್ಯ ವಿಚಾರಿಸುವ ಪ್ರಧಾನಿ ಮೋದಿಗೆ ರೈತರ ಸಮಸ್ಯೆ ಆಲಿಸುವ ಸೌಜನ್ಯ ಇಲ್ಲ. ರೈತರ ಜಪ ಮಾಡುತ್ತಾ ಅಧಿಕಾರಕ್ಕೆ ಬಂದವರು ರೈತರಿಗೆ ಮರಣ ಶಾಸನವಾಗ ಕಾನೂನು ಜಾರಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೈತ ನಾಯಕರಾದ ರವಿಕಿರಣ್ ಪುಣಚ, ಓಸ್ವಾಲ್ಡ್ ಫೆರ್ನಾಂಡೀಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ, ಯಾದವ ಶೆಟ್ಟಿ, ಕೃಷ್ಣಪ್ಪ ಸಾಲಿಯಾನ್, ರಾಮಣ್ಣ ವಿಟ್ಲ,ವಸಂತ ಆಚಾರಿ, ತುಳಸೀದಾಸ್, ಪದ್ಮಾವತಿ ಶೆಟ್ಟಿ, ಸನ್ನಿ ಡಿಸೋಜ, ರೋಯ್ ಕಾರ್ಲೊ, ಬೆನಿಟ್ಟಾ ಡೆಸಾ, ವಾಸುದೇವ ಉಚ್ಚಿಲ, ಲೋಕಯ್ಯ, ಸದಾಶಿವ ದಾಸ್, ಅಲ್ತಾಫ್ ತುಂಬೆ, ಜಯಂತ್ ನಾಯ್ಕ್, ಶಾಹುಲ್ ಹಮೀದ್, ಹಾರೂನ್ ರಶೀದ್, ಆಲ್ವಿನ್ ಲೊಬೊ, ಪ್ರಭಾಕರ ದೈವಗುಡ್ಡೆ, ಕನ್ಸೆಪ್ಟ ಡೆಸ ಮೊದಲಾದವರು ಉಪಸ್ಥಿತರಿದ್ದರು.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...