Wednesday, April 17, 2024

ನಾಟಕ ವೀಕ್ಷಣೆಗೆ ತೆರಳಿದವರ ಮನೆಯನ್ನು ಟಾರ್ಗೆಟ್ ಮಾಡಿ ಕಳವು; ಬಂಟ್ವಾಳ ತಾಲೂಕಿನಲ್ಲಿ ನಡೆದ ಘಟನೆ

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ನಗದು ಕಳ್ಳತನ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆಯಲ್ಲಿ ನಡೆದಿದೆ.

ತುಂಬೆ ಗ್ರಾಮದ ಮಜಿ ಎಂಬಲ್ಲಿ ನಾಲ್ಕು ಮನೆಗಳಿಗೆ ನುಗ್ಗಿದ ಕಳ್ಳರು ಒಂದು ಮನೆಯಿಂದ ಗೊಡ್ರೆಜ್‌ನಲ್ಲಿರಿಸಿದ್ದ 8 ಸಾವಿರ ರೂ. ನಗದನ್ನು ದೋಚಿಕೊಂಡು ಹೋಗಿದ್ದಾರೆ.

ಇನ್ನುಳಿದ ಮೂರು ಮನೆಗಳಿಗೆ ಮನೆಗೆ ನುಗ್ಗಿದ ಕಳ್ಳರು ಸಂಪೂರ್ಣ ಮನೆಯನ್ನು ಜಾಲಾಡಿದ್ದು ಯಾವುದೇ ವಸ್ತುಗಳು ಸಿಗದ ಕಾರಣ ಬರಿ ಕೈಯಲ್ಲಿ ವಾಪಾಸು ಆಗಿದ್ದಾರೆ.

ಮಜಿ ನಿವಾಸಿ ಮನೋಜ್ ಕೊಟ್ಟಾರಿ ಎಂಬವರ ಮನೆಯ ಹಿಂಬಾಗಿಲ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಗೊಡ್ರೆಜ್ ನಲ್ಲಿದ್ದ ಎಂಟು ಸಾವಿರ ರೂ. ನಗದನ್ನು ಕಳ್ಳರು ಕಳವು ಮಾಡಿದ್ದಾರೆ ಎಂದು ಅವರು ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಭಾಸ್ಕರ, ರಾಘವ, ಮಾದವ ಎಂಬವರ ಮನೆಗೂ ನುಗ್ಗಿ ಮನೆಯನ್ನು ಜಾಲಾಡಿದ್ದಾರೆ.

ಶಿವದೂತ ಗುಳಿಗ ನಾಟಕ: ತುಂಬೆ ಮಜಿಯಲ್ಲಿ ನಿನ್ನೆ ರಾತ್ರಿ “ಶಿವದೂತ ಗುಳಿಗ” ಎಂಬ ನಾಟಕ ಪ್ರದರ್ಶನ ನಡೆಯುತ್ತಿರುವ ಕಾರಣ ಈ ಪರಿಸರದ ಬಹುತೇಕ ಮನೆಯವರು ನಾಟಕ ವೀಕ್ಷಿಸಲು ಮನೆಗೆ ಬೀಗ ಹಾಕಿ ತೆರಳಿದ್ದರು. ನಾಟಕ ವೀಕ್ಷಿಸಿ ವಾಪಾಸು ಮನೆಗೆ ತೆರಳಿ ನೋಡಿದಾಗ ಮನೆಯ ಬೀಗ ಮುರಿದು ಮನೆಗೆ ಪ್ರವೇಶ ಮಾಡಿರುವುದು ಗಮನಕ್ಕೆ ಬಂದಿದೆ.

ಸ್ಥಳಕ್ಕೆ ಬಂಟ್ವಾಳ ಎಸ್.ಐ. ಪ್ರಸನ್ನ, ಅಪರಾಧ ವಿಭಾಗದ ಎಸ್.ಐ. ಸಂಜೀವ, ಎಚ್.ಸಿ. ಸುರೇಶ್ ಹಾಗೂ ಬೆರಳಚ್ಚು ತಜ್ಞರು, ಶ್ವಾನ ದಳ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.