Friday, April 5, 2024

ವಿಟ್ಲ ಎಸ್ಸೈ, ಊರ ನಾಗರಿಕರ ಸಹಕಾರದಿಂದ ಮಾಣಿಯಲ್ಲಿ ರಸ್ತೆ ವಿಭಜಕ ಅಳವಡಿಕೆ

ಮಾಣಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಹಾಗೂ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಸಂದಿಸುವ ಮಾಣಿ ಜಂಕ್ಷನ್ ನಲ್ಲಿ ವಾಹನ ಸವಾರರ ಸುರಕ್ಷತೆಯ ಹಿತದೃಷ್ಟಿಯಿಂದ ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ವಿನೋದ್ ರೆಡ್ಡಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಊರ ನಾಗರಿಕರ ಸಂಪೂರ್ಣ ಸಹಕಾರದೊಂದಿಗೆ ರಸ್ತೆ ವಿಭಾಜಕಗಳನ್ನು ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ಸ್ತಳೀಯ ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು. ಎರಡು ಹೆದ್ದಾರಿಗಳು ಸಂದಿಸುವ ಜಾಗದಲ್ಲಿ ಈ ರಸ್ತೆ ವಿಭಾಜಕದ ನಿರ್ಮಾಣ ಮುಂದಿನ ದಿನಗಳಲ್ಲಿ ರಸ್ತೆಯಲ್ಲಿ ವಾಹನಗಳ ವ್ಯವಸ್ತಿತ ಓಡಾಟಕ್ಕೆ ಅನುವು ಮಾಡಿಕೊಡಲಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...