Wednesday, April 10, 2024

*ಪಾಂಡವರಕಲ್ಲು ಶ್ರೀ ಬ್ರಹ್ಮಬೈದೆರೆ ಗರೋಡಿಯೊಳಗೆ ಕಿಡಿಗೇಡಿಗಳಿಂದ ದುಷ್ಕೃತ್ಯ-ಹಿಂದು ಜಾಗರಣ ವೇದಿಕೆಯಿಂದ ಬಂಟ್ವಾಳ ತಾಲೂಕು ಖಂಡನೆ*

ಬಂಟ್ವಾಳ : ಪವಿತ್ರ ಧಾರ್ಮಿಕ ಕ್ಷೇತ್ರವಾಗಿರುವ ಪಾಂಡವರಕಲ್ಲು ಗರಡಿ ಕ್ಷೇತ್ರ ಪುರಾತನ ಇತಿಹಾಸವುಳ್ಳ ಕ್ಷೇತ್ರವಾಗಿದೆ. ಇದು ಹಿಂದೂ ಧರ್ಮಿಯರ ಮಾತ್ರವಲ್ಲದೆ ಅನ್ಯಧರ್ಮಿಯರ ನಂಬಿಕೆಯ ಕ್ಷೇತ್ರವಾಗಿದೆ. ಇಲ್ಲಿನ ಕಾರಣಿಕ ಕೇವಲ ಬಾಯಿ ಮಾತಿನಲ್ಲಿ ಮಾತ್ರವಲ್ಲದೆ ಇದನ್ನು ಕಣ್ಣಾರೆ ಕಂಡ ಅನೇಕ ಸಾಕ್ಷಿಗಳಿವೆ. ಇಂತಹ ಕಾರಣಿಕದ ಕ್ಷೇತ್ರದೊಳಗೆ ಕೊಡಮಣಿತ್ತಾಯ ಪಿಲಿಚಾಮುಂಡಿ ಮತ್ತು ಬ್ರಹ್ಮಬೈದೆರ್ಕಳ ದೈವಸ್ಥಾನವಿದ್ದು ಅದರ ಸುತ್ತಲೂ ಕಿಡಿಗೇಡಿಗಳು ಸುಮಾರು 20 ಕ್ಕೂಅಧಿಕ ಗಾಜಿನ ಬಾಟಲಿಗಳನ್ನು ಚೂರು‍ಚೂರಾಗು ಹೊಡೆದು ಹಾಕಿ ಗರಡಿಯೊಳಗೆ ಯಾರಿಗೂ ನಡೆದಾಡದಂತೆ ದುಷ್ಕೃತ್ಯವನ್ನು ಮೆರೆದಿರುತ್ತಾರೆ.

ಇದನ್ನು ಹಿಂದು ಜಾಗರಣ ವೇದಿಕೆ ಮತ್ತು ಸಮಸ್ತ ಹಿಂದೂ ಸಮಾಜ ತೀವೃವಾಗಿ ಖಂಡಿಸುತ್ತದೆ.ಇಂತಹ ದುಷ್ಕೃತ್ಯ ಮೆರೆದ ಕಿಡಿಗೇಡಿಗಳು ಯಾರೆಂಬುವುದನ್ನು ಅಲ್ಲಿನ ಕಾರಣಿಕ ದೈವಗಳಾದ ಕೊಡಮಣಿತ್ತಾಯ ಬ್ರಹ್ಮಬೈದೆರ್ಲು ಶೀಘ್ರವಾಗಿ ಸಾರ್ವಜನಿಕವಾಗಿ ತೋರಿಸಿ ಕೊಡಬೇಕು ಎಂದು ಸಮಸ್ತ ಹಿಂದು ಸಮಾಜದ ಪ್ರಾರ್ಥನೆ.ಮತ್ತು ಇಂತಹ ಘಟನೇ ಮುಂದುವರಿದರೇ ಮುಳ್ಳನ್ನು ಮುಳ್ಳಿನಿಂದಲೇ ತೆಗೆಯುವ ಕಾರ್ಯಕ್ಕೆ ಹಿಂದೂ ಜಾಗರಣ ವೇದಿಕೆ ಸಿದ್ಧವಾಗಿದೆ , ಎಂದು ಈ ಮೂಲಕ ಎಚ್ಚರಿಸುತ್ತ ಇದ್ದೇವೆ

More from the blog

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ ನಡೆಯಿತು. ಬುಡೋಳಿ ಏನಾಜೆ ಬಿಲಾಲ್ ಮಸ್ಜಿದ್ ಏನಾಜೆ ಬುಡೋಳಿಯಲ್ಲಿ ಮಸೀದಿ ಖತೀಬರಾದ ಅಬ್ದುಲ್ ಮಜೀದ್ ದಾರಿಮೀ ಉಸ್ತಾದ್ ಜುಮ್ಮಾ ನೇತೃತ್ವ ವಹಿಸಿ ಈದ್ ಸಂದೇಶವನ್ನು...

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...